ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್ 19 ಸಾಂಕ್ರಾಮಿಕ ರೋಗ ಇರುವ ಕಾರಣಕ್ಕೆ ಪ್ರವೇಶಪತ್ರ ನೀಡುವ ಸಂದರ್ಭದಲ್ಲಿ ಆಯಾ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳು ತೆಗೆದುಕೊಳ್ಳಬೇಕಾದ ಮುನ್ನೆಚರಿಕಾ ಕ್ರಮಗಳ ಬಗ್ಗೆ ತಿಳಿವಳಿಕೆ ನೀಡುತ್ತಾರೆ. ಜೂನ್ 23ರಂದು ಪರೀಕ್ಷೆ ನಡೆಯುವ ಎಲ್ಲ ಕೇಂದ್ರಗಳ ಪ್ರತಿ ಕೊಠಡಿಯನ್ನು ಸ್ಯಾನಿಟೈಸ್ ಮಾಡಲಾಗುವುದು. ಪ್ರತಿ ಡೆಸ್ಕ್ ನಡುವೆ ಕನಿಷ್ಠ 3.5 ಅಡಿ ಅಂತರ ಕಾಯ್ದುಕೊಳ್ಳಲಾಗುವುದು. ಕಂಟೈನ್ಮೆಟ್ ವಲಯದ ವಿದ್ಯಾರ್ಥಿಗಳು, ಜ್ವರ ಬಂದವರು ಇದ್ದರೆ, ಅವರಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆಗೊಳಿಸಲಾಗುವುದು. ಮಕ್ಕಳು ಧೈರ್ಯದಿಂದ ಪರೀಕ್ಷೆಗೆ ಬರಬಹುದು’ ಎಂದರು.