ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕೊರತೆಯ ಹಿನ್ನೆಲೆಯಲ್ಲಿ ಹಿಂದಿನಿಂದಲೂ ವಿವಿಧ ತೆರನಾದ ಚಿಕಿತ್ಸೆಗಳಿಗೆ ಭಟ್ಕಳ ಸೇರಿದಂತೆ ಉತ್ತರಕನ್ನಡ ಜಿಲ್ಲೆಯ ಜನರು ಉಡುಪಿ, ಮಣಿಪಾಲ, ಮಂಗಳೂರಿಗೆ ತೆರಳುವುದು ಸಾಮಾನ್ಯವಾಗಿದೆ. ತುರ್ತು ಚಿಕಿತ್ಸೆಗಾಗಿ ಖಾಸಗಿಆಂಬುಲೆನ್ಸ್ ಬಳಕೆ ಮಾಡಲಾಗುತ್ತಿದೆ. ಭಟ್ಕಳ ಕೊರೊನಾ ಹಾಟ್ಸ್ಪಾಟ್ ಎಂದು ಗುರುತಿಸಿಕೊಂಡ ಬಳಿಕ ಉಡುಪಿಗೆ ತೆರಳುವ ಆಂಬುಲೆನ್ಸ್ ಸೇರಿದಂತೆ ಎಲ್ಲ ವಾಹನಗಳನ್ನು ಶಿರೂರು ಚೆಕ್ಪೋಸ್ಟ್ನಲ್ಲಿ ತಡೆ ಹಿಡಿಯಲಾಗುತ್ತಿದೆ ಎಂದು ಚಾಲಕ ಅಬ್ದುಲ್ ಖಾಲಿಕ್ ದೂರಿದರು.