ನಗರದಲ್ಲಿ ಬೆರಳೆಣಿಕೆಯ ಖಾಸಗಿ ಆಸ್ಪತ್ರೆಗಳಿವೆ.ತುರ್ತು ಚಿಕಿತ್ಸೆಯ ಅಗತ್ಯವಿಲ್ಲದರೋಗಿಗಳನ್ನು ಪುನಃ ಕಳುಹಿಸಲಾಯಿತು. ಮುಷ್ಕರದ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಡಾ.ಪಿಕಳೆನರ್ಸಿಂಗ್ ಹೋಂನ ಡಾ.ನಿತಿನ್ ಪಿಕಳೆ, ‘ಭಾರತೀಯ ವೈದ್ಯಕೀಯ ಸಂಘದ ಕರೆಯನ್ನು ಬೆಂಬಲಿಸಿ ಮುಷ್ಕರದಲ್ಲಿ ಭಾಗಿಯಾಗಿದ್ದೇವೆ. ವೈದ್ಯರಿಗೆ ರಕ್ಷಣೆ ಇಲ್ಲದಿದ್ದರೆ ರೋಗಿಗಳಿಗೆ ಸಮರ್ಪಕವಾಗಿ ಸೇವೆ ಕೊಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಒಗ್ಗಟ್ಟು ಪ್ರದರ್ಶಿಸಲು ಈ ಕ್ರಮ ಅನಿವಾರ್ಯವಾಗಿತ್ತು’ ಎಂದು ಹೇಳಿದರು.