ಬುಧವಾರ ಇಲ್ಲಿ ಆಯೋಜಿಸಿದ್ದ ಶಿರಸಿ ಶೈಕ್ಷಣಿಕ ಜಿಲ್ಲೆ ಅನುದಾನರಹಿತ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆಗಳ ಆಡಳಿತ ಮಂಡಳಿ ಅಧ್ಯಕ್ಷರ ಸಭೆಯಲ್ಲಿ ಅವರು ಮಾತನಾಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳ ಬಗ್ಗೆ ಸರ್ಕಾರಕ್ಕೆ ಮಲತಾಯಿ ಧೋರಣೆಯಿದೆ. ಖಾಸಗಿಯವರಿಗೆ ಮಾರಕವಾಗುವ ಸುತ್ತೋಲೆ ಹೊರಡಿಡುವ ಸರ್ಕಾರ, ಬಲ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ. ರಾಜ್ಯದ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಆರ್.ಟಿ.ಇ ಅಡಿಯಲ್ಲಿ ಸುಮಾರು ₹ 1700 ಕೋಟಿ ನೀಡುವುದು ಬಾಕಿಯಿದೆ. ಈ ಭಾರ ತಡೆಯಲಾಗದೇ ಕೆಲವು ಸಂಸ್ಥೆಗಳು ಮುಚ್ಚುವ ಹಂತ ತಲುಪಿವೆ. ತಕ್ಷಣ ಬಾಕಿ ಮೊತ್ತ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.