ದೇಶವು ಕೋವಿಡ್ನಿಂದಾಗಿ ಸಂದಿಗ್ಧ ಪರಿಸ್ಥಿತಿಯಲ್ಲಿದೆ. ಕೋಟ್ಯಂತರ ಭಾರತೀಯರು ಮನೆಯಿಂದ ಹೊರಬರದೇ ತಮ್ಮ ಜೀವಗಳರಕ್ಷಣೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿ ಕೇಂದ್ರ ಸರ್ಕಾರವುದೇಶದ ಸಾರ್ವಜನಿಕ ಸಂಪತ್ತುಗಳನ್ನು ಕಾರ್ಪೊರೇಟ್ ಕಂಪನಿಗಳಿಗೆ ಮಾರಾಟ ಮಾಡುವ ಕೆಲಸಕ್ಕೆ ಕೈಹಾಕಿದೆ. ಈಗಾಗಲೇ ನಮ್ಮ ದೇಶದ ಕಲ್ಲಿದ್ದಲು ಗಣಿಗಳನ್ನು, ರಕ್ಷಣಾವಲಯದ ಸಂಸ್ಥೆಗಳನ್ನು, ವಿದ್ಯುತ್ಚ್ಛಕ್ತಿನಿಗಮಗಳನ್ನು, ಎ.ಪಿ.ಎಂ.ಸಿ.ಗಳನ್ನು ಖಾಸಗೀಕರಣ ಮಾಡಿದೆ. ಇದೇ ಮಾದರಿಯಲ್ಲಿ ರೈಲ್ವೇಯನ್ನೂ ಖಾಸಗೀಕರಣ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.