ವಿಧಾನಪರಿಷತ್ತಿನಲ್ಲಿ ಪ್ರತಿಧ್ವನಿಸಿದ ‘ಮಹಿಮೆ’ ಸಮಸ್ಯೆ

ಕಾರವಾರ: ಹೊನ್ನಾವರ ತಾಲ್ಲೂಕಿನ ಉಪ್ಪೋಣಿ ಗ್ರಾಮ ಪಂಚಾಯಿತಿಯ ಮಹಿಮೆ ಎಂಬ ಕುಗ್ರಾಮಕ್ಕೆ ಬಸ್ ಸಂಚಾರ ಇಲ್ಲದಿರುವ ವಿಚಾರವು ಸೋಮವಾರ ವಿಧಾನಪರಿಷತ್ತಿನಲ್ಲಿ ಪ್ರತಿಧ್ವನಿಸಿತು.
ಇದನ್ನೂ ಓದಿ: ಕಾರವಾರ: ಹೆಸರಿನಲ್ಲೇ ಉಳಿದ ಗ್ರಾಮದ ‘ಮಹಿಮೆ’!
ಕಲಾಪದ ಶೂನ್ಯ ವೇಳೆಯಲ್ಲಿ ಮಾತನಾಡಿದ ಸದಸ್ಯ ಪಿ.ಎಂ.ಮುನಿರಾಜು ಗೌಡ, ‘ಪ್ರಜಾವಾಣಿ’ಯ ಮಾರ್ಚ್ 13ರ ಸಂಚಿಕೆಯಲ್ಲಿ ಪ್ರಕಟವಾದ ವಿಶೇಷ ವರದಿಯನ್ನು ಪ್ರಸ್ತಾಪಿಸಿದರು. ‘ಬಸ್ಸಿಗಾಗಿ 8 ಕಿ.ಮೀ ನಡೆವ ವಿದ್ಯಾರ್ಥಿಗಳು!’ ಶೀರ್ಷಿಕೆಯಲ್ಲಿ ಪತ್ರಿಕೆಯ ಮುಖಪುಟದಲ್ಲಿ ಅಂದು ವರದಿ ಪ್ರಕಟವಾಗಿತ್ತು.
‘ಬಸ್ ಸೌಕರ್ಯವಿಲ್ಲದ ಕಾರಣ ಸುಮಾರು 40 ಮಕ್ಕಳು ಶಾಲೆಗೆ ಹೋಗಲು ದಟ್ಟ ಕಾಡಿನ ನಡುವೆ ನಡೆದುಕೊಂಡು ಹೋಗುವುದು ಸಾಹಸವೇ ಸರಿ. ಇದರಿಂದ ಮಕ್ಕಳ ಕಲಿಕೆಯಲ್ಲಿ ಏಕಾಗ್ರತೆ ಸಾಧಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ಹೆಣ್ಣು ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ್ದರಿಂದ ಕಾಡು ದಾರಿಯಲ್ಲಿ ಸಂಜೆ ಮನೆಗೆ ಬರುವಾಗ ಏನಾದರೂ ಅನಾಹುತ ಆಗುವ ಮೊದಲೇ ಸರ್ಕಾರ ಎಚ್ಚೆತ್ತುಕೊಂಡು ಬಸ್ ಸೌಲಭ್ಯ ಒದಗಿಸಬೇಕು’ ಎಂದು ಮುನಿರಾಜು ಗೌಡ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಸುರೇಶಕುಮಾರ್, ‘ಕಳೆದ ವರ್ಷ ಆ ಹಳ್ಳಿಗೆ ನಾನೂ ಭೇಟಿ ನೀಡಿದ್ದೆ. ಅಲ್ಲಿನ ಪರಿಸ್ಥಿತಿಯನ್ನು ಅರಿತಿದ್ದು, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರೊಂದಿಗೆ ಚರ್ಚಿಸಿ ಬಸ್ ಸಂಚಾರದ ವ್ಯವಸ್ಥೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.