<p><strong>ಶಿರಸಿ:</strong> ಅನಾನಸ್, ಭತ್ತ, ಹತ್ತಿ, ಮೆಕ್ಕೆಜೋಳಕ್ಕೆ ಈಗ ನೀಡುತ್ತಿರುವ ಬೆಳೆಸಾಲ ಪ್ರಮಾಣವನ್ನು ಸ್ವಲ್ಪ ಏರಿಕೆ ಮಾಡುವ ಕುರಿತು ರಾಜ್ಯಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗೆ ಪ್ರಸ್ತಾವನೆ ಸಲ್ಲಿಸಲು ಸೋಮವಾರ ನಡೆದ ಜಿಲ್ಲಾ ತಾಂತ್ರಿಕ ಸಲಹಾ ಸಮಿತಿ (ಡಿಟಿಸಿ) ಸಭೆಯಲ್ಲಿ ನಿರ್ಣಯಿಸಲಾಯಿತು.</p>.<p>ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ಇಲ್ಲಿನ ಕೆಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ರೈತರಿಗೆ ಅನುಕೂಲ ಕಲ್ಪಿಸುವ ಬಗ್ಗೆ ಹಣಕಾಸು ಯೋಜನೆ ಸಿದ್ಧಪಡಿಸುವ ಕುರಿತು ಚರ್ಚಿಸಿದರು.</p>.<p>ಪ್ರತಿ ಎಕರೆ ಅನಾನಸ್ ಬೆಳೆಯುವ ಪ್ರದೇಶಕ್ಕೆ ರೈತರಿಗೆ ತಲಾ ₹45 ಸಾವಿರ ಬೆಳೆಸಾಲ ನೀಡಲಾಗುತ್ತಿದ್ದು, ಅದನ್ನು ₹50 ಸಾವಿರಕ್ಕೆ ಏರಿಕೆ ಮಾಡಬೇಕು. ಹತ್ತಿಗೆ ₹20ರ ಬದಲಾಗಿ ₹25 ಸಾವಿರ ನಿಗದಿಪಡಿಸಬೇಕು. ಭತ್ತ ಮತ್ತು ಮೆಕ್ಕೆಜೋಳಕ್ಕೆ ಸದ್ಯ ₹25 ಸಾವಿರ ಹಂಚಿಕೆ ಮಾಡಲಾಗುತ್ತಿದ್ದು, ಇದನ್ನು ₹1 ಸಾವಿರಕ್ಕೆ ಏರಿಸಿ, ₹26 ಸಾವಿರ ನೀಡಬೇಕು ಎಂಬ ಪ್ರಸ್ತಾವ ಕಳುಹಿಸಲು ಸಭೆ ಸಮ್ಮಿತಿಸಿತು.</p>.<p>ಸಭೆಯಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ ನಾಯಕ, ನಿರ್ದೇಶಕರಾದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ವ್ಯವಸ್ಥಾಪಕ ನಿರ್ದೇಶಕ ಆರ್.ಜಿ.ಭಾಗ್ವತ್, ಇತರ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಅನಾನಸ್, ಭತ್ತ, ಹತ್ತಿ, ಮೆಕ್ಕೆಜೋಳಕ್ಕೆ ಈಗ ನೀಡುತ್ತಿರುವ ಬೆಳೆಸಾಲ ಪ್ರಮಾಣವನ್ನು ಸ್ವಲ್ಪ ಏರಿಕೆ ಮಾಡುವ ಕುರಿತು ರಾಜ್ಯಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗೆ ಪ್ರಸ್ತಾವನೆ ಸಲ್ಲಿಸಲು ಸೋಮವಾರ ನಡೆದ ಜಿಲ್ಲಾ ತಾಂತ್ರಿಕ ಸಲಹಾ ಸಮಿತಿ (ಡಿಟಿಸಿ) ಸಭೆಯಲ್ಲಿ ನಿರ್ಣಯಿಸಲಾಯಿತು.</p>.<p>ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ಇಲ್ಲಿನ ಕೆಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ರೈತರಿಗೆ ಅನುಕೂಲ ಕಲ್ಪಿಸುವ ಬಗ್ಗೆ ಹಣಕಾಸು ಯೋಜನೆ ಸಿದ್ಧಪಡಿಸುವ ಕುರಿತು ಚರ್ಚಿಸಿದರು.</p>.<p>ಪ್ರತಿ ಎಕರೆ ಅನಾನಸ್ ಬೆಳೆಯುವ ಪ್ರದೇಶಕ್ಕೆ ರೈತರಿಗೆ ತಲಾ ₹45 ಸಾವಿರ ಬೆಳೆಸಾಲ ನೀಡಲಾಗುತ್ತಿದ್ದು, ಅದನ್ನು ₹50 ಸಾವಿರಕ್ಕೆ ಏರಿಕೆ ಮಾಡಬೇಕು. ಹತ್ತಿಗೆ ₹20ರ ಬದಲಾಗಿ ₹25 ಸಾವಿರ ನಿಗದಿಪಡಿಸಬೇಕು. ಭತ್ತ ಮತ್ತು ಮೆಕ್ಕೆಜೋಳಕ್ಕೆ ಸದ್ಯ ₹25 ಸಾವಿರ ಹಂಚಿಕೆ ಮಾಡಲಾಗುತ್ತಿದ್ದು, ಇದನ್ನು ₹1 ಸಾವಿರಕ್ಕೆ ಏರಿಸಿ, ₹26 ಸಾವಿರ ನೀಡಬೇಕು ಎಂಬ ಪ್ರಸ್ತಾವ ಕಳುಹಿಸಲು ಸಭೆ ಸಮ್ಮಿತಿಸಿತು.</p>.<p>ಸಭೆಯಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ ನಾಯಕ, ನಿರ್ದೇಶಕರಾದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ವ್ಯವಸ್ಥಾಪಕ ನಿರ್ದೇಶಕ ಆರ್.ಜಿ.ಭಾಗ್ವತ್, ಇತರ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>