<p><strong>ಶಿರಸಿ</strong>: ಅರಣ್ಯ ಇಲಾಖೆಯು ಗ್ರುಪ್ ಎ, ಬಿ ವೃಂದದ ಹುದ್ದೆಗಳಿಗೆ ಆಯ್ಕೆ ಮಾಡುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರಣ್ಯಶಾಸ್ತ್ರ ಪದವಿ ಪಡೆದುಕೊಳ್ಳುವಂತೆ ಆದೇಶ ಮಾಡಬೇಕು ಎಂದು ಒತ್ತಾಯಿಸಿ ಅರಣ್ಯಶಾಸ್ತ್ರ ಪದವಿ ಕಾಲೇಜು ವಿದ್ಯಾರ್ಥಿಗಳು ಶುಕ್ರವಾರ ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.</p>.<p>ಕಳೆದ ಕೆಲವು ದಿನಗಳಿಂದ ತರಗತಿ ಬಹಿಷ್ಕರಿಸಿ ಈ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ನ್ಯಾಯ ಸಿಗುವವರೆಗೆ ಅನಿರ್ದಿಷ್ಟಾವಧಿ ಮುಷ್ಕರ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.</p>.<p>ಪ್ರತಿಭಟನಾ ಮೆರವಣಿಗೆ, ಬೀದಿ ನಾಟಕ ಪ್ರದರ್ಶನ ನಡೆಸಿದ್ದ ವಿದ್ಯಾರ್ಥಿಗಳು ಇದೀಗ ಅರಣ್ಯಶಾಸ್ತ್ರ ಪದವೀಧರ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ ಎಂದು ಬಿಂಬಿಸಲು ಧರಣಿ ವೇಳೆ ಅಣಕು ಶವ ಪ್ರದರ್ಶಿಸಿದರು.</p>.<p>‘ವಲಯ ಅರಣ್ಯಾಧಿಕಾರಿ ಹುದ್ದೆಗೆ ಈ ಮೊದಲು ಶೇ 75:25 ಅನುಪಾತ ಜಾರಿಯಲ್ಲಿತ್ತು. ಅದನ್ನು 50:50ಕ್ಕೆ ಇಳಿಕೆ ಮಾಡಿದ್ದು ಸರಿಯಲ್ಲ. ಸರ್ಕಾರ ಆದೇಶ ಹಿಂಪಡೆಯಬೇಕು’ ಎಂದು ಧರಣಿ ನಿರತರು ಒತ್ತಾಯಿಸಿದರು.</p>.<p>‘ನೇಮಕಾತಿ ವೇಳೆ ಅರಣ್ಯಶಾಸ್ತ್ರ ಪದವೀಧರರ ಹೊರತಾದವರಿಗೆ ಆದ್ಯತೆ ಹೆಚ್ಚಿಸಲಾಗುತ್ತಿದೆ. ಉದ್ಯೋಗದಿಂದ ವಂಚಿತರಾಗುತ್ತಿದ್ದೇವೆ’ ಎಂದು ಅಳಲು ತೋಡಿಕೊಂಡರು.</p>.<p>ಸಂಜಯ ಎನ್.ಆರ್., ಹೇಮಂತ್, ಪ್ರಮಥ್ ಹೆಗಡೆ, ಪರಮಾನಂದ, ನಿಖಿತಾ, ರಕ್ಷಾ ಹಾಗೂ ಇತರರು ಇದ್ದರು. ಉಪವಿಭಾಗಾಧಿಕಾರಿ ದೇವರಾಜ್ ಆರ್, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷ ವೀಣಾ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಆನಂದ ಸಾಲೇರ್ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು.</p>.<p>ಅರಣ್ಯಶಾಸ್ತ್ರ ಪದವಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲಿಸಿದೆ. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಧರಣಿ ಸ್ಥಳಕ್ಕೆ ತೆರಳಿ ನೈತಿಕ ಬೆಂಬಲ ಸೂಚಿಸಿದರು. ಎಸ್.ಕೆ.ಭಾಗವತ, ಜಗದೀಶ ಗೌಡ, ಜಿ.ಎನ್.ಹೆಗಡೆ ಮುರೇಗಾರ, ಗಣೇಶ ದಾವಣಗೆರೆ, ಜ್ಯೋತಿ ಪಾಟೀಲ ಇದ್ದರು.</p>.<p><strong>ಅರಣ್ಯಶಾಸ್ತ್ರ ಪದವಿ ವಿದ್ಯಾರ್ಥಿಗಳ ಸಂಕಷ್ಟವನ್ನು ಸರ್ಕಾರ ಆಲಿಸಿ, ಸಮಸ್ಯೆ ಬಗೆಹರಿಸಬೇಕು. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಬಾರದು .</strong></p>.<p class="Subhead"><em>ಭೀಮಣ್ಣ ನಾಯ್ಕ</em></p>.<p><em>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಅರಣ್ಯ ಇಲಾಖೆಯು ಗ್ರುಪ್ ಎ, ಬಿ ವೃಂದದ ಹುದ್ದೆಗಳಿಗೆ ಆಯ್ಕೆ ಮಾಡುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರಣ್ಯಶಾಸ್ತ್ರ ಪದವಿ ಪಡೆದುಕೊಳ್ಳುವಂತೆ ಆದೇಶ ಮಾಡಬೇಕು ಎಂದು ಒತ್ತಾಯಿಸಿ ಅರಣ್ಯಶಾಸ್ತ್ರ ಪದವಿ ಕಾಲೇಜು ವಿದ್ಯಾರ್ಥಿಗಳು ಶುಕ್ರವಾರ ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.</p>.<p>ಕಳೆದ ಕೆಲವು ದಿನಗಳಿಂದ ತರಗತಿ ಬಹಿಷ್ಕರಿಸಿ ಈ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ನ್ಯಾಯ ಸಿಗುವವರೆಗೆ ಅನಿರ್ದಿಷ್ಟಾವಧಿ ಮುಷ್ಕರ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.</p>.<p>ಪ್ರತಿಭಟನಾ ಮೆರವಣಿಗೆ, ಬೀದಿ ನಾಟಕ ಪ್ರದರ್ಶನ ನಡೆಸಿದ್ದ ವಿದ್ಯಾರ್ಥಿಗಳು ಇದೀಗ ಅರಣ್ಯಶಾಸ್ತ್ರ ಪದವೀಧರ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ ಎಂದು ಬಿಂಬಿಸಲು ಧರಣಿ ವೇಳೆ ಅಣಕು ಶವ ಪ್ರದರ್ಶಿಸಿದರು.</p>.<p>‘ವಲಯ ಅರಣ್ಯಾಧಿಕಾರಿ ಹುದ್ದೆಗೆ ಈ ಮೊದಲು ಶೇ 75:25 ಅನುಪಾತ ಜಾರಿಯಲ್ಲಿತ್ತು. ಅದನ್ನು 50:50ಕ್ಕೆ ಇಳಿಕೆ ಮಾಡಿದ್ದು ಸರಿಯಲ್ಲ. ಸರ್ಕಾರ ಆದೇಶ ಹಿಂಪಡೆಯಬೇಕು’ ಎಂದು ಧರಣಿ ನಿರತರು ಒತ್ತಾಯಿಸಿದರು.</p>.<p>‘ನೇಮಕಾತಿ ವೇಳೆ ಅರಣ್ಯಶಾಸ್ತ್ರ ಪದವೀಧರರ ಹೊರತಾದವರಿಗೆ ಆದ್ಯತೆ ಹೆಚ್ಚಿಸಲಾಗುತ್ತಿದೆ. ಉದ್ಯೋಗದಿಂದ ವಂಚಿತರಾಗುತ್ತಿದ್ದೇವೆ’ ಎಂದು ಅಳಲು ತೋಡಿಕೊಂಡರು.</p>.<p>ಸಂಜಯ ಎನ್.ಆರ್., ಹೇಮಂತ್, ಪ್ರಮಥ್ ಹೆಗಡೆ, ಪರಮಾನಂದ, ನಿಖಿತಾ, ರಕ್ಷಾ ಹಾಗೂ ಇತರರು ಇದ್ದರು. ಉಪವಿಭಾಗಾಧಿಕಾರಿ ದೇವರಾಜ್ ಆರ್, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷ ವೀಣಾ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಆನಂದ ಸಾಲೇರ್ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು.</p>.<p>ಅರಣ್ಯಶಾಸ್ತ್ರ ಪದವಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲಿಸಿದೆ. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಧರಣಿ ಸ್ಥಳಕ್ಕೆ ತೆರಳಿ ನೈತಿಕ ಬೆಂಬಲ ಸೂಚಿಸಿದರು. ಎಸ್.ಕೆ.ಭಾಗವತ, ಜಗದೀಶ ಗೌಡ, ಜಿ.ಎನ್.ಹೆಗಡೆ ಮುರೇಗಾರ, ಗಣೇಶ ದಾವಣಗೆರೆ, ಜ್ಯೋತಿ ಪಾಟೀಲ ಇದ್ದರು.</p>.<p><strong>ಅರಣ್ಯಶಾಸ್ತ್ರ ಪದವಿ ವಿದ್ಯಾರ್ಥಿಗಳ ಸಂಕಷ್ಟವನ್ನು ಸರ್ಕಾರ ಆಲಿಸಿ, ಸಮಸ್ಯೆ ಬಗೆಹರಿಸಬೇಕು. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಬಾರದು .</strong></p>.<p class="Subhead"><em>ಭೀಮಣ್ಣ ನಾಯ್ಕ</em></p>.<p><em>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>