ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಕೃಷ್ಣಾರೆಡ್ಡಿ, ಟೆಕ್ನಿಷಿಯನ್ ರವಿ ಪಾಟೀಲ ಹಾಗೂ ಇಲಾಖೆ ಸಿಬ್ಬಂದಿ ಚೇತನ್ ಇವರಿಗೆ ಅಂಕೋಲಾ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ಕರೆದುಕೊಂಡು ಹೋಗಲಾಗಿದೆ.
ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ. ಚಾಲಕನಿಗೆ ಸಾಧಾರಣ ಸ್ವರೂಪದ ಗಾಯಗಳಾಗಿವೆ. ಸಚಿವ ಶಿವರಾಮ ಹೆಬ್ಬಾರ ಅಂಕೋಲಾ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ, ಸಾಂತ್ವನ ಹೇಳಿದರು. ಗಂಭೀರ ಸ್ವರೂಪದ ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವ್ಯವಸ್ಥೆ ಕಲ್ಪಿಸಿದರು.