ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾತುರ್ಮಾಸ್ಯ: ರಾಘವೇಶ್ವರ ಸ್ವಾಮೀಜಿ ಪುರಪ್ರವೇಶ

Last Updated 12 ಜುಲೈ 2022, 14:04 IST
ಅಕ್ಷರ ಗಾತ್ರ

ಕಾರವಾರ: ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ 29ನೇ ಚಾತುರ್ಮಾಸ್ಯದ ಅಂಗವಾಗಿ ಗೋಕರ್ಣದ ಅಶೋಕೆಯಲ್ಲಿ ಮಂಗಳವಾರ, ಪುರಪ್ರವೇಶ ಕಾರ್ಯಕ್ರಮವು ವಿಜೃಂಭಣೆಯಿಂದ ನೆರವೇರಿತು. ಚಾತುರ್ಮಾಸ್ಯವು ಜುಲೈ 13ರಂದು ಆರಂಭವಾಗಲಿದೆ.

ಮಧ್ಯಾಹ್ನ 2.30ಕ್ಕೆ ನಡೆಯುವ ಧರ್ಮಸಭೆಯಲ್ಲಿ ಸ್ವಾಮೀಜಿ ಚಾತುರ್ಮಾಸ್ಯ ಸಂದೇಶ ನೀಡುವರು. ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ದಿನಕರ ಶೆಟ್ಟಿ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸುವರು.

ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆರಂಭಕ್ಕೆ ಪೂರ್ವಭಾವಿಯಾಗಿ, ಎರಡು ವರ್ಷಗಳಿಂದ ಗುರುಕುಲಗಳು ಕಾರ್ಯಾರಂಭ ಮಾಡಿವೆ. ಸಮಾಜಕ್ಕೆ ಅವುಗಳ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಈ ಚಾತುರ್ಮಾಸ್ಯವನ್ನು, ‘ಗುರುಕುಲ ಚಾತುರ್ಮಾಸ್ಯ’ವಾಗಿ ಹಮ್ಮಿಕೊಳ್ಳಲಾಗಿದೆ.

ಜುಲೈ 16ರಂದು ಶ್ರೀ ವರ್ಧಂತಿ, ಆ.19ರಂದು ಶ್ರೀಕೃಷ್ಣ ಜನ್ಮಾಷ್ಟಮಿ, ಆ.31ರಂದು ಗಣೇಶ ಚತುರ್ಥಿಯಂಥ ವಿಶೇಷ ಕಾರ್ಯಕ್ರಮಗಳು ಚಾತುರ್ಮಾಸ್ಯದ ಅವಧಿಯಲ್ಲಿ ನಡೆಯಲಿವೆ. ಸೆ.10ರಂದು ‘ಚಾತುರ್ಮಾಸ್ಯ ಪ್ರಶಸ್ತಿ’ ಪ್ರದಾನ ಹಾಗೂ ಸೀಮೋಲ್ಲಂಘನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT