ವರದಾ ನದಿಯ ನೀರಿನ ಮಟ್ಟ ಇನ್ನಷ್ಟು ಏರಿಕೆಯಾಗಿದೆ. 2000ಕ್ಕೂ ಅಧಿಕ ಎಕರೆ ಕೃಷಿ ಭೂಮಿ ನೀರಿನಲ್ಲಿ ಮುಳುಗಿದೆ. ಮುಳುಗಿರುವ ಅಜ್ಜರಣಿ ಸೇತುವೆಯ ಮೇಲೆ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಹುಳಗೋಳ, ಮತ್ತಿಗಾರ, ಕೊಪ್ಪಲತೋಟ, ಶಿರಸಿಮಕ್ಕಿ, ಸವಣೂರು ಮೊದಲಾದ ಕಡೆಗಳಲ್ಲಿ ಮನೆಗಳು, ಸಾರ್ವಜನಿಕ ಆಸ್ತಿಗೆ ಧಕ್ಕೆಯಾಗಿದೆ.