ಅಶ್ವಿನಿ ಸರ್ಕಲ್, ಕಾಲೇಜು ರಸ್ತೆ, ಹುಬ್ಬಳ್ಳಿ ರಸ್ತೆ, ಕೋಟೆಕೆರೆ, ಮರಾಠಿಕೊಪ್ಪದಲ್ಲಿ ಚರಂಡಿ ಉಕ್ಕಿ ಹರಿದು, ರಸ್ತೆ ತುಂಬ ತ್ಯಾಜ್ಯಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಮಾಸ್ತಿಕಟ್ಟೆ ರಸ್ತೆ, ವಿದ್ಯಾನಗರ ಕ್ರಾಸ್ ಬಳಿ ಮರ ಮುರಿದು ಬಿದ್ದು, ಕೆಲ ಕಾಲ ಸಂಚಾರ ವ್ಯತ್ಯಯಗೊಂಡಿತು. ಇಂದಿರಾನಗರ ರಸ್ತೆಗೆ ಅಡ್ಡಲಾಗಿ ತೆಂಗಿನ ಮರವೊಂದು ಮುರಿದು ಬಿದ್ದು, ವಾಹನ ಸವಾರರು ಸಮಸ್ಯೆ ಅನುಭವಿಸಿದರು.