ವಾರದ ಹಿಂದೆ ಮೊದಲ ಮಳೆಯಾದಾಗಲೇ ರಸ್ತೆಯ ಮೇಲೆ ನೀರು ನಿಂತು ಹೊಳೆಯಂತಾಗಿತ್ತು. ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಆಗ, ಉಪವಿಭಾಗಾಧಿಕಾರಿ, ಪೊಲೀಸರು ಸ್ಥಳಕ್ಕೆ ಭೇಟಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ನಂತರ ಯಲ್ಲಾಪುರ ರಸ್ತೆಯ ಅರ್ಬನ್ ಬ್ಯಾಂಕ್ ಪಕ್ಕದಲ್ಲಿ ಗಟಾರ ನಿರ್ಮಿಸಲು ನಗರಸಭೆ ಮುಂದಾಗಿತ್ತು. ಸ್ಥಳೀಯರು ಇದನ್ನು ವಿರೋಧಿಸಿದ್ದರು. ಬಹಳ ಹಿಂದಿನಿಂದ ಇದ್ದ ರಾಜ ಕಾಲುವೆಯನ್ನು ಸ್ಥಳೀಯ ಕೆಲವರು ಮುಚ್ಚಿದ್ದರಿಂದ ಈ ಅವಾಂತರ ಸೃಷ್ಟಿಯಾಗಿದೆ. ಇದನ್ನು ತೆರವುಗೊಳಿಸಬೇಕು’ ಎಂದು ಅಲ್ಲಿನ ನಿವಾಸಿಗಳು ಒತ್ತಾಯಿಸಿದ್ದಾರೆ.