ನಾಡಿನ ವಿವಿಧೆಡೆ, ಹೊರರಾಜ್ಯಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಪ್ರತಿ ವರ್ಷ ಮಧ್ಯರಾತ್ರಿ ಅಥವಾ ನಸುಕಿನ ಜಾವ ಎಳೆಯಲಾಗುತ್ತಿದ್ದ ರಥವನ್ನು ಈ ಬಾರಿ ಬೆಳಿಗ್ಗೆ 8 ಗಂಟೆಗೆ ಎಳೆದರು. ಮಧ್ಯರಾತ್ರಿವರೆಗೂ ಭಕ್ತರಿಗೆ ರಥಾರೂಢ ಶ್ರೀದೇವಿ ಭೂದೇವಿ ಸಹಿತ ವೆಂಕಟರಮಣ ದೇವರ ಉತ್ಸವ ಮೂರ್ತಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ರಥಾರೂಢ ವೆಂಕಟರಮಣನ ದರ್ಶನ ಪಡೆದು ಭಕ್ತರು ಪುನೀತರಾದರು.