‘ಹುಬ್ಬಳ್ಳಿ ಆಸ್ಪತ್ರೆಗೆ ಹೋಗಿ ಬಂದ ಎರಡು ದಿನಗಳಬಳಿಕ ಅಂದರೆ, ಜುಲೈ 2ರಂದು ಕೋವಿಡ್ ಪಾಸಿಟಿವ್ ಇರುವ ಕುರಿತು ವೈದ್ಯರಿಂದ ಕರೆ ಬಂದಿತ್ತು. ತಂದೆಯ ವಯಸ್ಸು ನಮ್ಮ ಕುಟುಂಬದವರ ಆತಂಕ ಹೆಚ್ಚಲು ಕಾರಣವಾಗಿತ್ತು. ಗಂಟಲು ದ್ರವದ ವರದಿ ಬರುವರೆಗೂ ತಂದೆಯು ಮನೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿಯೇ ಇರುತ್ತಿದ್ದರು. ಕೋವಿಡ್ ಸೋಂಕಿನಿಂದ ಗುಣಮುಖರಾದ ನಂತರ ಹೆಚ್ಚು ಕ್ರಿಯಾಶೀಲರಾಗಿದ್ದು, ಸಮಯಕ್ಕೆ ಸರಿಯಾಗಿ ಊಟ, ನಿದ್ರೆ ಮಾಡುತ್ತಿದ್ದಾರೆ’ ಎಂದು ಅವರ ಪುತ್ರ ಮಲ್ಲಿಕಾರ್ಜುನ ಹೇಳಿದರು.