ನಗರದ ಸರ್ವೋದಯ ನಗರದ ನಿವಾಸಿ ಗೀತಾ ಶಿವನಾಥ ಬಾನಾವಳಿಕರ್ (30) ಎಂಬುವವರು ಮೃತಪಟ್ಟವರು. ಮೂರು ದಿನಗಳ ಹಿಂದೆ ಅವರಿಗೆ ಹೆರಿಗೆಯಾಗಿತ್ತು. ಇದು ಅವರ ಎರಡನೇ ಹೆರಿಗೆಯಾಗಿರುವ ಕಾರಣ, ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆಂದು ಗುರುವಾರ ಬೆಳಿಗ್ಗೆ ಶಸ್ತ್ರಚಿಕಿತ್ಸಾ ಕೊಠಡಿಗೆ ಕರೆದುಕೊಂಡು ಹೋಗಲಾಗಿತ್ತು. ಬಳಿಕ ತುರ್ತು ನಿಗಾ ಘಟಕದಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಮಾಡಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಸಂಜೆಯ ವೇಳೆಗೆ ಮೃತಪಟ್ಟಿದ್ದರು.