ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರು ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದರು. ನಂತರ ಪೊಲೀಸರು, ಗೃಹ ರಕ್ಷಕ ದಳ, ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್ಸಿಸಿ, ಶಾಲಾ ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಅಜಿತ ಮನೋಚೇತನಾ ಶಾಲೆಯ ಬುದ್ಧಿಮಾಂದ್ಯ ಮಕ್ಕಳು ಪಥ ಸಂಚಲನದಲ್ಲಿ ಭಾಗವಹಿಸಿ ಗಮನ ಸೆಳೆದರು.