‘ತಾಲ್ಲೂಕಿನಲ್ಲಿ ಕೋವಿಡ್ ನಿಯಂತ್ರಿಸಲು ಈ ಬಾರಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವುದಿಲ್ಲ’ ಎಂದು ಗೋಪಾಲಕೃಷ್ಣ ನಾಯಕ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನಗರಸಭೆ ಸದಸ್ಯರಾದ ಗಣಪತಿ ನಾಯ್ಕ, ಪ್ರದೀಪ ಶೆಟ್ಟಿ, ‘ಕೊರೊನಾ ನಡುವೆಯೇ ಹಬ್ಬ ಬಂದಿರುವುದರಿಂದ ಆತಂಕ ಸಹಜ. ಆದರೆ, ವಿನಾಯಕನ ಪೂಜೆಯಿಂದ ಜನರಲ್ಲಿ ಉಂಟಾಗಿರುವ ಆತಂಕ ದೂರವಾಗಬಹುದು. ಸರಳ ಆಚರಣೆಗೆ ಅವಕಾಶ ನೀಡಬೇಕು’ ಎಂದರು.