<p><strong>ಯಲ್ಲಾಪುರ:</strong> ತಾಲ್ಲೂಕಿನ ಶಿರಸಿ ರಸ್ತೆಯಲ್ಲಿ ಬೇಡ್ತಿ ನದಿಗೆ ನೂತನವಾಗಿ ನಿರ್ಮಿಸಲಾಗಿರುವ ಸೇತುವೆಯ ಸಂಪರ್ಕ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.</p>.<p>ಮಳೆಗಾಲದಲ್ಲಿ ನೀರು ತುಂಬಿ ಹರಿಯದಂತೆ ಬೇಡ್ತಿ ಸೇತುವೆಯನ್ನು ಎತ್ತರವಾಗಿ ನಿರ್ಮಿಸಲಾಗಿದೆ. ಸುಮಾರು 15 ಅಡಿ ಮಣ್ಣು, ಕಲ್ಲು ತುಂಬಿ ಸಂಪರ್ಕ ರಸ್ತೆ ನಿರ್ಮಿಸಲಾಗಿತ್ತು. ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಮಣ್ಣು ಕುಸಿದಿದ್ದು, ರಸ್ತೆಯ ಒಂದು ಬದಿಯಲ್ಲಿ ಬಿರುಕು ಬಿಟ್ಟಿದೆ. ಮಳೆಯ ನೀರು ಈ ಬಿರುಕಿನಲ್ಲಿ ಹೋಗಿ ಬಿರುಕು ಇನ್ನಷ್ಟು ಅಗಲವಾಗುವ ಆತಂಕ ಎದುರಾಗಿದೆ.</p>.<p>ಈಗ ಒಂದು ಬದಿಯಲ್ಲಿ ಮಾತ್ರ ಸುಮಾರು 15 ಅಡಿಗಳಷ್ಟು ಬಿರುಕು ಕಾಣಿಸಿಕೊಂಡಿದ್ದೆ. ಇಲ್ಲಿನ ಮಣ್ಣು ಕುಸಿದರೆ ರಸ್ತೆ ಬದಿಗೆ ಹಾಕಿದ್ದ ರಕ್ಷಣಾ ಗೋಡೆಗೆ (ರೇಲಿಂಗ್ಸ್) ಹಾನಿಯಾಗಬಹುದು. ಬಿರುಕು ರಸ್ತೆಯ ಮಧ್ಯಕ್ಕೆ ಮುಂದುವರಿದರೆ ವಾಹನ ಸಂಚಾರಕ್ಕೆ ತೊಂದರೆಯಾಗಬಹುದು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ವಿನಾಯಕ ಹೆಗಡೆ, ‘<br />ಸಂಪರ್ಕ ರಸ್ತೆಗೆ ಕನಿಷ್ಠ 15 ಅಡಿ ಮಣ್ಣು ಕಲ್ಲು ತುಂಬಿ ನಿರ್ಮಿಸಲಾಗಿದೆ. ರಸ್ತೆ 30 ಅಡಿ ಅಗಲವಿದೆ. ಹಾಗಾಗಿ ಯಾವುದೇ ಅಪಾಯವಿಲ್ಲ. ಮೊದಲ ಮಳೆಗೆ ಹಾಕಿದ ಮಣ್ಣು ಈ ರೀತಿ ಸಡಿಲಗೊಂಡು ಸ್ವಲ್ಪ ಮಟ್ಟಿಗೆ ಬಿರುಕು ಬಿಡುವುದು ಸಾಮಾನ್ಯ. ಒಂದು ಮಳೆಗಾಲ ಕಳೆದ ನಂತರ ಮಣ್ಣು ಗಟ್ಟಿಯಾಗುತ್ತದೆ. ನಂತರ ಕಲ್ಲಿನ ಪಿಚ್ಚಿಂಗ್ ನಿರ್ಮಿಸಲಾಗುವುದು. ಬಿರುಕು ಬಿಟ್ಟ ಸ್ಥಳದಲ್ಲಿ ದುರಸ್ತಿ ಮಾಡುವಂತೆ ಗುತ್ತಿಗೆದಾರರಿಗೆ ಈಗಾಗಲೇ ಸೂಚನೆ ನೀಡಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ:</strong> ತಾಲ್ಲೂಕಿನ ಶಿರಸಿ ರಸ್ತೆಯಲ್ಲಿ ಬೇಡ್ತಿ ನದಿಗೆ ನೂತನವಾಗಿ ನಿರ್ಮಿಸಲಾಗಿರುವ ಸೇತುವೆಯ ಸಂಪರ್ಕ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.</p>.<p>ಮಳೆಗಾಲದಲ್ಲಿ ನೀರು ತುಂಬಿ ಹರಿಯದಂತೆ ಬೇಡ್ತಿ ಸೇತುವೆಯನ್ನು ಎತ್ತರವಾಗಿ ನಿರ್ಮಿಸಲಾಗಿದೆ. ಸುಮಾರು 15 ಅಡಿ ಮಣ್ಣು, ಕಲ್ಲು ತುಂಬಿ ಸಂಪರ್ಕ ರಸ್ತೆ ನಿರ್ಮಿಸಲಾಗಿತ್ತು. ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಮಣ್ಣು ಕುಸಿದಿದ್ದು, ರಸ್ತೆಯ ಒಂದು ಬದಿಯಲ್ಲಿ ಬಿರುಕು ಬಿಟ್ಟಿದೆ. ಮಳೆಯ ನೀರು ಈ ಬಿರುಕಿನಲ್ಲಿ ಹೋಗಿ ಬಿರುಕು ಇನ್ನಷ್ಟು ಅಗಲವಾಗುವ ಆತಂಕ ಎದುರಾಗಿದೆ.</p>.<p>ಈಗ ಒಂದು ಬದಿಯಲ್ಲಿ ಮಾತ್ರ ಸುಮಾರು 15 ಅಡಿಗಳಷ್ಟು ಬಿರುಕು ಕಾಣಿಸಿಕೊಂಡಿದ್ದೆ. ಇಲ್ಲಿನ ಮಣ್ಣು ಕುಸಿದರೆ ರಸ್ತೆ ಬದಿಗೆ ಹಾಕಿದ್ದ ರಕ್ಷಣಾ ಗೋಡೆಗೆ (ರೇಲಿಂಗ್ಸ್) ಹಾನಿಯಾಗಬಹುದು. ಬಿರುಕು ರಸ್ತೆಯ ಮಧ್ಯಕ್ಕೆ ಮುಂದುವರಿದರೆ ವಾಹನ ಸಂಚಾರಕ್ಕೆ ತೊಂದರೆಯಾಗಬಹುದು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ವಿನಾಯಕ ಹೆಗಡೆ, ‘<br />ಸಂಪರ್ಕ ರಸ್ತೆಗೆ ಕನಿಷ್ಠ 15 ಅಡಿ ಮಣ್ಣು ಕಲ್ಲು ತುಂಬಿ ನಿರ್ಮಿಸಲಾಗಿದೆ. ರಸ್ತೆ 30 ಅಡಿ ಅಗಲವಿದೆ. ಹಾಗಾಗಿ ಯಾವುದೇ ಅಪಾಯವಿಲ್ಲ. ಮೊದಲ ಮಳೆಗೆ ಹಾಕಿದ ಮಣ್ಣು ಈ ರೀತಿ ಸಡಿಲಗೊಂಡು ಸ್ವಲ್ಪ ಮಟ್ಟಿಗೆ ಬಿರುಕು ಬಿಡುವುದು ಸಾಮಾನ್ಯ. ಒಂದು ಮಳೆಗಾಲ ಕಳೆದ ನಂತರ ಮಣ್ಣು ಗಟ್ಟಿಯಾಗುತ್ತದೆ. ನಂತರ ಕಲ್ಲಿನ ಪಿಚ್ಚಿಂಗ್ ನಿರ್ಮಿಸಲಾಗುವುದು. ಬಿರುಕು ಬಿಟ್ಟ ಸ್ಥಳದಲ್ಲಿ ದುರಸ್ತಿ ಮಾಡುವಂತೆ ಗುತ್ತಿಗೆದಾರರಿಗೆ ಈಗಾಗಲೇ ಸೂಚನೆ ನೀಡಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>