<p>ಶಿರಸಿ: ತಾಲ್ಲೂಕಿನ ಬಿಸಲಕೊಪ್ಪದಿಂದ ಉಳ್ಳಾಲದ ನಡುವಿನ ರಸ್ತೆ ತಾತ್ಕಾಲಿಕ ದುರಸ್ತಿ ಕೆಲಸವನ್ನು ಬುಧವಾರ ಆರಂಭಿಸಲಾಗಿದೆ.</p>.<p>‘ದುರವಸ್ಥೆಯ ರಸ್ತೆ:ಗ್ರಾಮಸ್ಥರ ಹಿಡಿಶಾಪ’ ಶೀರ್ಷಿಕೆಯಡಿ ಜು.7 ರಂದು ‘ಪ್ರಜಾವಾಣಿ’ ವರದಿ ಪ್ರಕಟಿಸಿದ ಬಳಿಕ ಎಚ್ಚೆತ್ತುಕೊಂಡ ಪಂಚಾಯತರಾಜ್ ಎಂಜಿನಿಯರಿಂಗ್ ಇಲಾಖೆ ರಸ್ತೆಯಲ್ಲಿದ್ದ ಹೊಂಡಗಳನ್ನು ಮುಚ್ಚುವ ಕೆಲಸ ಕೈಗೆತ್ತಿಕೊಂಡಿದೆ.</p>.<p>ರಸ್ತೆಯ ಹೊಂಡಗಳನ್ನು ಕಾಂಕ್ರೀಟ್ ಮಿಶ್ರಣದಿಂದ ಮುಚ್ಚಲಾಗುತ್ತಿದೆ. ಈ ಭಾಗದಲ್ಲಿ ರಸ್ತೆ ಸಂಚಾರ ತಡೆದು ಕೆಲಸ ನಡೆಸಲಾಗುತ್ತಿದೆ. ಶಿರಸಿ, ಯಲ್ಲಾಪುರ ಮತ್ತು ಮುಂಡಗೋಡ ತಾಲ್ಲೂಕುಗಳನ್ನು ಸಂಪರ್ಕಿಸುವ ಮುಖ್ಯ ರಸ್ತೆ ಆಗಿದ್ದರೂ ನಿರ್ವಹಣೆಗೆ ನಿರಾಸಕ್ತಿ ತೋರಲಾಗಿದೆ ಎಂಬ ಆರೋಪ ಬಿಸಲಕೊಪ್ಪ ಭಾಗದ ಜನರಿಂದ ವ್ಯಕ್ತವಾಗಿತ್ತು.</p>.<p>‘ಮಳೆಯಿಂದ ರಸ್ತೆಯ ಸ್ಥಿತಿ ಹದಗೆಟ್ಟಿತ್ತು. ಓಡಾಟಕ್ಕೆ ಸಮಸ್ಯೆಯೂ ಆಗಿತ್ತು. ತಾತ್ಕಾಲಿಕ ದುರಸ್ತಿ ಕೈಗೆತ್ತಿಕೊಂಡಿದ್ದು ಸಮಾಧಾನಕರ ಸಂಗತಿಯಾಗಿದ್ದರೂ, ಮಳೆಗಾಲದ ಬಳಿಕ ಹೊಸ ರಸ್ತೆ ನಿರ್ಮಾಣವಾಗಬೇಕಿದೆ’ ಎಂದು ಬಿಸಲಕೊಪ್ಪ ಗ್ರಾಮ ಪಂಚಾಯ್ತಿ ಅಧ್ಯಕ್ಷ ರಾಘವೇಂದ್ರ ನಾಯ್ಕ, ಸದಸ್ಯ ವಿದ್ಯಾಧರ ಭಟ್ಟ ತಿಳಿಸಿದರು.</p>.<p>‘ಮಳೆಗಾಲದ ಕಾರಣ ತಾತ್ಕಾಲಿಕ ದುರಸ್ತಿ ಕೆಲಸ ನಡೆಯುತ್ತಿದೆ. ಬಳಿಕ ಹೊಸ ರಸ್ತೆಗೆ ₹60 ಲಕ್ಷ ಮೀಸಲಿಡಲಾಗಿದೆ’ ಎಂದು ಪಂಚಾಯತ್ರಾಜ್ ಎಂಜಿನಿಯರಿಂಗ್ ಶಿರಸಿ ಉಪವಿಭಾಗದ ಎಇಇ ರಾಮಚಂದ್ರ ಗಾಂವಕರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ತಾಲ್ಲೂಕಿನ ಬಿಸಲಕೊಪ್ಪದಿಂದ ಉಳ್ಳಾಲದ ನಡುವಿನ ರಸ್ತೆ ತಾತ್ಕಾಲಿಕ ದುರಸ್ತಿ ಕೆಲಸವನ್ನು ಬುಧವಾರ ಆರಂಭಿಸಲಾಗಿದೆ.</p>.<p>‘ದುರವಸ್ಥೆಯ ರಸ್ತೆ:ಗ್ರಾಮಸ್ಥರ ಹಿಡಿಶಾಪ’ ಶೀರ್ಷಿಕೆಯಡಿ ಜು.7 ರಂದು ‘ಪ್ರಜಾವಾಣಿ’ ವರದಿ ಪ್ರಕಟಿಸಿದ ಬಳಿಕ ಎಚ್ಚೆತ್ತುಕೊಂಡ ಪಂಚಾಯತರಾಜ್ ಎಂಜಿನಿಯರಿಂಗ್ ಇಲಾಖೆ ರಸ್ತೆಯಲ್ಲಿದ್ದ ಹೊಂಡಗಳನ್ನು ಮುಚ್ಚುವ ಕೆಲಸ ಕೈಗೆತ್ತಿಕೊಂಡಿದೆ.</p>.<p>ರಸ್ತೆಯ ಹೊಂಡಗಳನ್ನು ಕಾಂಕ್ರೀಟ್ ಮಿಶ್ರಣದಿಂದ ಮುಚ್ಚಲಾಗುತ್ತಿದೆ. ಈ ಭಾಗದಲ್ಲಿ ರಸ್ತೆ ಸಂಚಾರ ತಡೆದು ಕೆಲಸ ನಡೆಸಲಾಗುತ್ತಿದೆ. ಶಿರಸಿ, ಯಲ್ಲಾಪುರ ಮತ್ತು ಮುಂಡಗೋಡ ತಾಲ್ಲೂಕುಗಳನ್ನು ಸಂಪರ್ಕಿಸುವ ಮುಖ್ಯ ರಸ್ತೆ ಆಗಿದ್ದರೂ ನಿರ್ವಹಣೆಗೆ ನಿರಾಸಕ್ತಿ ತೋರಲಾಗಿದೆ ಎಂಬ ಆರೋಪ ಬಿಸಲಕೊಪ್ಪ ಭಾಗದ ಜನರಿಂದ ವ್ಯಕ್ತವಾಗಿತ್ತು.</p>.<p>‘ಮಳೆಯಿಂದ ರಸ್ತೆಯ ಸ್ಥಿತಿ ಹದಗೆಟ್ಟಿತ್ತು. ಓಡಾಟಕ್ಕೆ ಸಮಸ್ಯೆಯೂ ಆಗಿತ್ತು. ತಾತ್ಕಾಲಿಕ ದುರಸ್ತಿ ಕೈಗೆತ್ತಿಕೊಂಡಿದ್ದು ಸಮಾಧಾನಕರ ಸಂಗತಿಯಾಗಿದ್ದರೂ, ಮಳೆಗಾಲದ ಬಳಿಕ ಹೊಸ ರಸ್ತೆ ನಿರ್ಮಾಣವಾಗಬೇಕಿದೆ’ ಎಂದು ಬಿಸಲಕೊಪ್ಪ ಗ್ರಾಮ ಪಂಚಾಯ್ತಿ ಅಧ್ಯಕ್ಷ ರಾಘವೇಂದ್ರ ನಾಯ್ಕ, ಸದಸ್ಯ ವಿದ್ಯಾಧರ ಭಟ್ಟ ತಿಳಿಸಿದರು.</p>.<p>‘ಮಳೆಗಾಲದ ಕಾರಣ ತಾತ್ಕಾಲಿಕ ದುರಸ್ತಿ ಕೆಲಸ ನಡೆಯುತ್ತಿದೆ. ಬಳಿಕ ಹೊಸ ರಸ್ತೆಗೆ ₹60 ಲಕ್ಷ ಮೀಸಲಿಡಲಾಗಿದೆ’ ಎಂದು ಪಂಚಾಯತ್ರಾಜ್ ಎಂಜಿನಿಯರಿಂಗ್ ಶಿರಸಿ ಉಪವಿಭಾಗದ ಎಇಇ ರಾಮಚಂದ್ರ ಗಾಂವಕರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>