ಅವಗಡದಿಂದ ಮಹಾಬಲೇಶ್ವರ ಗಾಗು ನಾಯ್ಕ ಎಂಬವರಿಗೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದು ಯಲ್ಲಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆ ಚಾವಣಿ ಕುಸಿದಿದ್ದರಿಂದ ಸುಮಾರು 60 ಸಾವಿರ ರೂಪಾಯಿ ಹಾನಿಯಾಗಿರಬಹುದೆಂದು ಕಂದಾಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಹಾಗೂ ತಾಲ್ಲೂಕು ಆಸ್ಪತ್ರೆಗೆ ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್ ಭೇಟಿ ನೀಡಿದ್ದು, ಗಾಯಾಳುವಿಗೆ ಸಾಂತ್ವನ ಹೇಳಿದ್ದಾರೆ.