ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕನ್ನಡ: ರೋಟರಿ ಪದಾಧಿಕಾರಿಗಳ ಅಧಿಕಾರ ಸ್ವೀಕಾರ

Last Updated 20 ಜುಲೈ 2020, 13:16 IST
ಅಕ್ಷರ ಗಾತ್ರ

ಶಿರಸಿ: ಇಲ್ಲಿನ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಇತ್ತೀಚೆಗೆ ಇಲ್ಲಿ ನಡೆಯಿತು. ಅಧ್ಯಕ್ಷರಾಗಿ ಮಹೇಶ ತೇಲಂಗ, ಕಾರ್ಯದರ್ಶಿಯಾಗಿ ಗಣೇಶ ಹೆಗಡೆ, ಖಜಾಂಚಿಯಾಗಿ ನಾಗರಾಜ ಭಟ್ಟ, ಜಂಟಿ ಕಾರ್ಯದರ್ಶಿಯಾಗಿ ಕಿರಣ ಭಟ್ಟ ಅಧಿಕಾರ ಸ್ವೀಕರಿಸಿದರು.

ಸಾಂಕ್ರಾಮಿಕ ಕಾಯಿಲೆ ಕಾರಣಕ್ಕೆ ಪರಸ್ಪರ ಅಂತರ ಕಾಯ್ದುಕೊಂಡು, ಫೇಸ್‌ಶೀಲ್ಡ್ ಹಾಗೂ ಕೈಗವಸು ಧರಿಸಿ ಎಲ್ಲರೂ ಭಾಗವಹಿಸಿದ್ದರು. ಪದಾಧಿಕಾರಿಗಳು ಮಾತ್ರ ಕಾರ್ಯಕ್ರಮದಲ್ಲಿದ್ದರು. ಜಿಲ್ಲಾ ಪ್ರಾಂತಪಾಲ ಸಂಗ್ರಾಮ ಪಾಟೀಲ ಆನ್‌ಲೈನ್‌ನಲ್ಲಿ ಶುಭ ಹಾರೈಸಿದರು. ಸಹಾಯಕ ಪ್ರಾಂತಪಾಲ ಪ್ರವೀಣ ಕಾಮತ್ ಪದಗ್ರಹಣ ನೆರವೇರಿಸಿದರು. ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಸದಸ್ಯರು ಝೂಮ್ ಆ್ಯಪ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಿಕಟಪೂರ್ವ ಅಧ್ಯಕ್ಷ ಡಾ.ಶಿವರಾಮ ಕೆ.ವಿ, ಡಾ. ದಿನೇಶ ಹೆಗಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT