ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕ್ಷೇತ್ರದ ಸಂಸದ, ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಐದು ಬಾರಿ ಆಯ್ಕೆಯಾಗಿದ್ದರೂ, ಹೆಚ್ಚಿನ ಅಭಿವೃದ್ಧಿ ಮಾಡಿಲ್ಲ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮತದಾರ ಬದಲಾವಣೆ ಬಯಸುತ್ತಿದ್ದಾನೆ. ಕ್ಷೇತ್ರದಲ್ಲಿ ಈಡಿಗ ಮತದಾರರು ನನ್ನನ್ನು ಬೆಂಬಲಿಸುತ್ತಾರೆ. ಈ ಅಂಶ ನನ್ನ ಗೆಲುವಿಗೆ ಸಹಕಾರಿಯಾಗಲಿದೆ’ ಎಂದರು.