ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸುದ್ದಿಗಾರರು, ‘ಪಟ್ಟಣದಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ನಡೆದಿದ್ದು, ಅಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರು ವಿಧಾನ ಸಭೆ ಅಭ್ಯರ್ಥಿಯಾಗಬೇಕು ಎಂದು ಹಲವರು ಅಭಿಪ್ರಾಯ ಮಂಡಿಸಿದ್ದಾರೆ. ಒಂದುವೇಳೆ, ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರರನ್ನಾಗಿ ಕಣಕ್ಕೆ ನಿಲ್ಲಿಸುವುದಾಗಿ ಹೇಳಿದ್ದಾರೆ’ ಎಂದು ಗಮನ ಸೆಳೆದರು.