<p><strong>ಕಾರವಾರ</strong>: ‘ರಾಜ್ಯದ ಗಡಿಜಿಲ್ಲೆಗಳಲ್ಲಿ ಕೋವಿಡ್ ದೃಢಪಡುತ್ತಿರುವುದು ಹೆಚ್ಚಾಗುತ್ತಿವೆ. ಹಾಗಾಗಿ ಅಧಿವೇಶನವನ್ನು ಬೆಳಗಾವಿಯಲ್ಲಿ ಹಮ್ಮಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನಃ ಪರಿಶೀಲಿಸಲಿ. ಬೆಳಗಾವಿಯ ಬದಲು ಬೆಂಗಳೂರಿನಲ್ಲೇ ನಡೆಸುವುದು ಸೂಕ್ತ’ ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿಯು ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿದೆ. ಇದರಿಂದ ಸಮಸ್ಯೆ ಎದುರಾಗಬಹುದು. ಅಧಿವೇಶನಕ್ಕೆ ಸಾವಿರಾರು ಜನರು ಬರುತ್ತಾರೆ. ಕೋವಿಡ್ ಆತಂಕವು ಈಗಾಗಲೇ ಇದೆ. ಹಾಗಾಗಿ ಸುವರ್ಣಸೌಧದಲ್ಲಿ ಅಧಿವೇಶನ ಆಯೋಜಿಸುವ ಬಗ್ಗೆ ಸರ್ಕಾರ ಯೋಚಿಸಬೇಕು’ ಎಂದು ಮನವಿ ಮಾಡಿದರು.</p>.<p>ಇದೇವೇಳೆ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ 12 ಸದಸ್ಯರನ್ನು ಅಮಾನತು ಮಾಡಿರುವುದನ್ನು ಖಂಡಿಸಿದ ಅವರು, ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ರಾಜ್ಯದ ಗಡಿಜಿಲ್ಲೆಗಳಲ್ಲಿ ಕೋವಿಡ್ ದೃಢಪಡುತ್ತಿರುವುದು ಹೆಚ್ಚಾಗುತ್ತಿವೆ. ಹಾಗಾಗಿ ಅಧಿವೇಶನವನ್ನು ಬೆಳಗಾವಿಯಲ್ಲಿ ಹಮ್ಮಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನಃ ಪರಿಶೀಲಿಸಲಿ. ಬೆಳಗಾವಿಯ ಬದಲು ಬೆಂಗಳೂರಿನಲ್ಲೇ ನಡೆಸುವುದು ಸೂಕ್ತ’ ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿಯು ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿದೆ. ಇದರಿಂದ ಸಮಸ್ಯೆ ಎದುರಾಗಬಹುದು. ಅಧಿವೇಶನಕ್ಕೆ ಸಾವಿರಾರು ಜನರು ಬರುತ್ತಾರೆ. ಕೋವಿಡ್ ಆತಂಕವು ಈಗಾಗಲೇ ಇದೆ. ಹಾಗಾಗಿ ಸುವರ್ಣಸೌಧದಲ್ಲಿ ಅಧಿವೇಶನ ಆಯೋಜಿಸುವ ಬಗ್ಗೆ ಸರ್ಕಾರ ಯೋಚಿಸಬೇಕು’ ಎಂದು ಮನವಿ ಮಾಡಿದರು.</p>.<p>ಇದೇವೇಳೆ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ 12 ಸದಸ್ಯರನ್ನು ಅಮಾನತು ಮಾಡಿರುವುದನ್ನು ಖಂಡಿಸಿದ ಅವರು, ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>