ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿಯು ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿದೆ. ಇದರಿಂದ ಸಮಸ್ಯೆ ಎದುರಾಗಬಹುದು. ಅಧಿವೇಶನಕ್ಕೆ ಸಾವಿರಾರು ಜನರು ಬರುತ್ತಾರೆ. ಕೋವಿಡ್ ಆತಂಕವು ಈಗಾಗಲೇ ಇದೆ. ಹಾಗಾಗಿ ಸುವರ್ಣಸೌಧದಲ್ಲಿ ಅಧಿವೇಶನ ಆಯೋಜಿಸುವ ಬಗ್ಗೆ ಸರ್ಕಾರ ಯೋಚಿಸಬೇಕು’ ಎಂದು ಮನವಿ ಮಾಡಿದರು.