ಬಡ ಕುಟುಂಬದವರಾಗಿರುವ ಯುವಕರಿಗೆ ಇದೀಗ ಜೀವನ ಸಾಗಿಸಲೂ ಕಷ್ಟವಾಗಿದೆ. ಈ ಬಗ್ಗೆ ಡಿವೈಎಸ್ ಪಿ ಶಂಕರ್ ಮಾರಿಹಾಳ ಅವರಿಗೆ ದೂರು ನೀಡಲಾಗಿದ್ದು, ಅವರು ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ್ದು, ಸಂಜೆಯ ಒಳಗೆ ವೇತನ ಪಾವತಿ ಮಾಡುವಂತೆ ತಿಳಿಸಿದ್ದಾರೆ. ಇಲ್ಲದಿದ್ದಲ್ಲಿ ಸಂಜೆ ಕಂಪೆನಿಯ ವಿರುದ್ಧ ದೂರು ದಾಖಲು ಮಾಡುವುದಾಗಿಯೂ ತಿಳಿಸಿದ್ದಾರೆ.