<p><strong>ಶಿರಸಿ: </strong>‘ಸಪ್ತಪದಿ’ ಕಾರ್ಯಕ್ರಮವು ಬಡವರು, ಮಧ್ಯಮ ವರ್ಗ, ಶ್ರೀಮಂತರು ಹೀಗೆ ಎಲ್ಲ ವರ್ಗದವರು ಸರಳವಾಗಿ ವಿವಾಹವಾಗಲು ಮುಕ್ತ ಅವಕಾಶ ಕಲ್ಪಿಸಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಹಿಂದೂ ಧಾರ್ಮಿಕ ಸಂಸ್ಥೆಗಳು ಧರ್ಮದಾಯ ದತ್ತಿಗಳ ಇಲಾಖೆ ಹಾಗೂ ಜಿಲ್ಲಾಡಳಿತ ಜಂಟಿಯಾಗಿ ಇಲ್ಲಿನ ಮಾರಿಕಾಂಬಾ ದೇವಾಲಯದ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ‘ಸಪ್ತಪದಿ’ ಕುರಿತು ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸರಳ ವಿವಾಹದಲ್ಲಿ ವಧು–ವರರ ನವ ಉಡುಗೆ, ತಾಳಿ ಸೇರಿ ಪ್ರತಿ ದಂಪತಿಗೆ ಸರ್ಕಾರ ₹ 55ಸಾವಿರ ವೆಚ್ಚ ಮಾಡುತ್ತದೆ. ಈ ವಿವಾಹವು ಬಡವರಿಗಷ್ಟೇ ಸೀಮಿತವಲ್ಲ. ಎಲ್ಲರೂ ಮುಕ್ತವಾಗಿ ಭಾಗವಹಿಸಬಹುದು. ಏ.26ರಂದು ನಡೆಯುವ ಮೊದಲ ಹಂತದ ವಿವಾಹಕ್ಕೆ ಅರ್ಜಿ ಸಲ್ಲಿಸಲು ಮಾ.27 ಕೊನೆಯ ದಿನವಾಗಿದೆ ಎಂದರು.</p>.<p>ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವ ಶಿವರಾಮ ಹೆಬ್ಬಾರ್ ಕಾರ್ಯಕ್ರಮ ಉದ್ಘಾಟಿಸಿದರು. ‘ದೇಶದಲ್ಲೇ ಮೊದಲ ಬಾರಿಗೆ ಮುಜರಾಯಿ ಇಲಾಖೆ ಇಂತಹ ಕಾರ್ಯಕ್ರಮ ಸಂಘಟಿಸಿದ್ದು ಶ್ಲಾಘನೀಯ. ಸಮಾಜದಲ್ಲಿ ತುಳಿತಕ್ಕೊಳಗಾದವರು, ಕಷ್ಟಗಳನ್ನು ಎದುರಿಸಿದವರಿಗೆ ಮಾತ್ರ ಇಂತಹ ಕಾರ್ಯಕ್ರಮಗಳ ಕಲ್ಪನೆ ಮೂಡಲು ಸಾಧ್ಯ’ ಎಂದರು.</p>.<p>ಶಾಸಕ ದಿನಕರ ಶೆಟ್ಟಿ ಮಾತನಾಡಿ, ‘ಸರಳ ಸಾಮೂಹಿಕ ವಿವಾಹದಲ್ಲಿ ಸಾಧಕ -ಬಾಧಕ ಎರಡೂ ಇವೆ. ಕರಾವಳಿ ಭಾಗದಲ್ಲಿ ಸಾಮೂಹಿಕ ವಿವಾಹಕ್ಕೆ ಆಸಕ್ತಿ ತೋರುವವರು ಕಡಿಮೆ. ಕರಾವಳಿ ಜನರಲ್ಲಿ ಸಾಮೂಹಿಕ ಸರಳ ವಿವಾಹ ಉತ್ತೇಜಿಸಲು ಪ್ರಯತ್ನಿಸುತ್ತೇನೆ’ ಎಂದರು.</p>.<p>ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ಮದುವೆಗಾಗಿ ಸಾಲ ಮಾಡಿ ಕಷ್ಟಪಡುವವರಿಗೆ ಸರಳ ವಿವಾಹ ಸಹಕಾರಿಯಾಗಲಿದೆ ಎಂದರು.<br />ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ ಮಾತನಾಡಿ, ಸರಳವಾಗಿ ಮದುವೆಯಾಗುವವರಿಗೆ ಸಾಮೂಹಿಕ ವಿವಾಹ ವೇದಿಕೆಯಾಗಲಿದೆ. ಇದು ಸಮಾಜಮುಖಿ ಕಾರ್ಯವಾಗಿದೆ’ ಎಂದರು.</p>.<p>ಜಿಲ್ಲಾ ಪಂಚಾಯ್ತಿ ಸದಸ್ಯೆ ಉಷಾ ಹೆಗಡೆ, ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷ ಸೂರ್ಯನಾರಾಯಣ ಭಟ್ಟ, ಕಾರ್ಯದರ್ಶಿ ರಾಮಚಂದ್ರ ಮಟ್ಟಿ, ನಿವೃತ್ತ ಪ್ರಾಚಾರ್ಯ ಕೆ.ಎನ್.ಹೊಸ್ಮನಿ, ಮಾರಿಕಾಂಬಾ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಡಾ.ವೆಂಕಟೇಶ ನಾಯ್ಕ, ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಇದ್ದರು. ಧಾರ್ಮಿಕ ದತ್ತಿ ಇಲಾಖೆ ಉಪವಿಭಾಗಾಧಿಕಾರಿ ಪುರುಷೋತ್ತಮ ಎಸ್ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>‘ಸಪ್ತಪದಿ’ ಕಾರ್ಯಕ್ರಮವು ಬಡವರು, ಮಧ್ಯಮ ವರ್ಗ, ಶ್ರೀಮಂತರು ಹೀಗೆ ಎಲ್ಲ ವರ್ಗದವರು ಸರಳವಾಗಿ ವಿವಾಹವಾಗಲು ಮುಕ್ತ ಅವಕಾಶ ಕಲ್ಪಿಸಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಹಿಂದೂ ಧಾರ್ಮಿಕ ಸಂಸ್ಥೆಗಳು ಧರ್ಮದಾಯ ದತ್ತಿಗಳ ಇಲಾಖೆ ಹಾಗೂ ಜಿಲ್ಲಾಡಳಿತ ಜಂಟಿಯಾಗಿ ಇಲ್ಲಿನ ಮಾರಿಕಾಂಬಾ ದೇವಾಲಯದ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ‘ಸಪ್ತಪದಿ’ ಕುರಿತು ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸರಳ ವಿವಾಹದಲ್ಲಿ ವಧು–ವರರ ನವ ಉಡುಗೆ, ತಾಳಿ ಸೇರಿ ಪ್ರತಿ ದಂಪತಿಗೆ ಸರ್ಕಾರ ₹ 55ಸಾವಿರ ವೆಚ್ಚ ಮಾಡುತ್ತದೆ. ಈ ವಿವಾಹವು ಬಡವರಿಗಷ್ಟೇ ಸೀಮಿತವಲ್ಲ. ಎಲ್ಲರೂ ಮುಕ್ತವಾಗಿ ಭಾಗವಹಿಸಬಹುದು. ಏ.26ರಂದು ನಡೆಯುವ ಮೊದಲ ಹಂತದ ವಿವಾಹಕ್ಕೆ ಅರ್ಜಿ ಸಲ್ಲಿಸಲು ಮಾ.27 ಕೊನೆಯ ದಿನವಾಗಿದೆ ಎಂದರು.</p>.<p>ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವ ಶಿವರಾಮ ಹೆಬ್ಬಾರ್ ಕಾರ್ಯಕ್ರಮ ಉದ್ಘಾಟಿಸಿದರು. ‘ದೇಶದಲ್ಲೇ ಮೊದಲ ಬಾರಿಗೆ ಮುಜರಾಯಿ ಇಲಾಖೆ ಇಂತಹ ಕಾರ್ಯಕ್ರಮ ಸಂಘಟಿಸಿದ್ದು ಶ್ಲಾಘನೀಯ. ಸಮಾಜದಲ್ಲಿ ತುಳಿತಕ್ಕೊಳಗಾದವರು, ಕಷ್ಟಗಳನ್ನು ಎದುರಿಸಿದವರಿಗೆ ಮಾತ್ರ ಇಂತಹ ಕಾರ್ಯಕ್ರಮಗಳ ಕಲ್ಪನೆ ಮೂಡಲು ಸಾಧ್ಯ’ ಎಂದರು.</p>.<p>ಶಾಸಕ ದಿನಕರ ಶೆಟ್ಟಿ ಮಾತನಾಡಿ, ‘ಸರಳ ಸಾಮೂಹಿಕ ವಿವಾಹದಲ್ಲಿ ಸಾಧಕ -ಬಾಧಕ ಎರಡೂ ಇವೆ. ಕರಾವಳಿ ಭಾಗದಲ್ಲಿ ಸಾಮೂಹಿಕ ವಿವಾಹಕ್ಕೆ ಆಸಕ್ತಿ ತೋರುವವರು ಕಡಿಮೆ. ಕರಾವಳಿ ಜನರಲ್ಲಿ ಸಾಮೂಹಿಕ ಸರಳ ವಿವಾಹ ಉತ್ತೇಜಿಸಲು ಪ್ರಯತ್ನಿಸುತ್ತೇನೆ’ ಎಂದರು.</p>.<p>ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ಮದುವೆಗಾಗಿ ಸಾಲ ಮಾಡಿ ಕಷ್ಟಪಡುವವರಿಗೆ ಸರಳ ವಿವಾಹ ಸಹಕಾರಿಯಾಗಲಿದೆ ಎಂದರು.<br />ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ ಮಾತನಾಡಿ, ಸರಳವಾಗಿ ಮದುವೆಯಾಗುವವರಿಗೆ ಸಾಮೂಹಿಕ ವಿವಾಹ ವೇದಿಕೆಯಾಗಲಿದೆ. ಇದು ಸಮಾಜಮುಖಿ ಕಾರ್ಯವಾಗಿದೆ’ ಎಂದರು.</p>.<p>ಜಿಲ್ಲಾ ಪಂಚಾಯ್ತಿ ಸದಸ್ಯೆ ಉಷಾ ಹೆಗಡೆ, ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷ ಸೂರ್ಯನಾರಾಯಣ ಭಟ್ಟ, ಕಾರ್ಯದರ್ಶಿ ರಾಮಚಂದ್ರ ಮಟ್ಟಿ, ನಿವೃತ್ತ ಪ್ರಾಚಾರ್ಯ ಕೆ.ಎನ್.ಹೊಸ್ಮನಿ, ಮಾರಿಕಾಂಬಾ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಡಾ.ವೆಂಕಟೇಶ ನಾಯ್ಕ, ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಇದ್ದರು. ಧಾರ್ಮಿಕ ದತ್ತಿ ಇಲಾಖೆ ಉಪವಿಭಾಗಾಧಿಕಾರಿ ಪುರುಷೋತ್ತಮ ಎಸ್ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>