<p><strong>ಕಾರವಾರ: </strong>ತೀವ್ರ ವಿರೋಧದ ನಡುವೆಯೂ ಪ್ರಾರಂಭಗೊಂಡಿರುವ ಅಲೆ ತಡೆಗೋಡೆ ನಿರ್ಮಾಣ ಕಾಮಗಾರಿ ವಿರುದ್ಧ ಆಕ್ರೋಶಗೊಂಡ ಮೀನುಗಾರರ ಪ್ರತಿಭಟನೆಯು ಮಂಗಳವಾರವೂ ಮುಂದುವರಿಯಿತು.</p>.<p>‘ಸಾಗರಮಾಲಾ’ ಯೋಜನೆಯಡಿಯಲ್ಲಿ ಬಂದರು ವಿಸ್ತರಣೆಯ ಭಾಗವಾದ ಈ ಕಾಮಗಾರಿಗೆ ಸ್ಥಳೀಯರು ಹಾಗೂ ಮೀನುಗಾರರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಸೋಮವಾರ ಇಡೀ ದಿನ ಪ್ರತಿಭಟನೆ, ಅಂಗಡಿ ಮುಂಗಟ್ಟುಗಳ ಬಂದ್ನಿಂದ ಸ್ತಬ್ಧವಾಗಿದ್ದನಗರದಲ್ಲಿ ಎರಡನೇ ದಿನವೂ ಪ್ರತಿಭಟನೆ ನಡೆಯಿತು. ನಗರದಲ್ಲಿ ಜನಜೀವನ ಎಂದಿನಂತಿತ್ತು.</p>.<p>ಕಾಮಗಾರಿಯ ಸ್ಥಳದಲ್ಲಿಸೇರಿದನೂರಾರು ಪ್ರತಿಭಟನಾಕಾರರು, ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘ಇಡ್ಲಿ ಸಾಂಬಾರ್ ಅಚ್ಛಾ ಹೈ, ಬಿಜೆಪಿ ಸರ್ಕಾರ್ ಲುಚ್ಛಾ ಹೈ’ ಎಂಬ ಘೋಷಣೆಯೊಂದಿಗೆ ತಮ್ಮ ಸಿಟ್ಟನ್ನು ಹೊರಹಾಕಿದರು. ತಮ್ಮ ಬೇಡಿಕೆಗಳಿಗೆ ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಟೀಕಾಪ್ರಹಾರ ಮಾಡಿದರು.</p>.<p>‘ಪ್ರತಿಭಟನೆಗೆ ಇಳಿದವರ ಮೇಲೆ ಪೊಲೀಸರು ದಬ್ಬಾಳಿಕೆ ಮಾಡಿದ್ದಾರೆ.ನ್ಯಾಯಕ್ಕಾಗಿ ಹೋರಾಟ ಮಾಡಿದವರನ್ನುಬಂಧಿಸಿದ್ದಾರೆ. ನಮ್ಮ ಪ್ರಾಣ ಹೋದರೂ ಸರಿ, ಕಾರವಾರದ ಜನತೆಗೆ ಅನ್ಯಾಯವೆಸಗುವ ಈ ಕಾಮಗಾರಿ ನಡೆಯುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ. ನಮ್ಮ ಕಷ್ಟಕ್ಕೆ ಸ್ಪಂದಿಸದ ಜನಪ್ರತಿನಿಧಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ’ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.</p>.<p>‘ಮೀನುಗಾರಿಕೆಯನ್ನೇ ನಂಬಿ ನೂರಾರು ಕುಟುಂಬಗಳು ಜೀವನ ಸಾಗಿಸುತ್ತಿವೆ. ಆದರೆ, ಯಾರದೋ ಲಾಭಕ್ಕಾಗಿ ನಮ್ಮ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ. ಬಡ ಮೀನುಗಾರರಬದುಕನ್ನು ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ. ನಮ್ಮ ಅಸ್ತಿತ್ವಕ್ಕಾಗಿಒಗ್ಗಟ್ಟಿಂದನಾವು ಹೋರಾಡುತ್ತೇವೆ’ ಎಂದು ಪ್ರತಿಭಟನಾ ನಿರತ ಮಹಿಳೆಯರು ಆವೇಶದಿಂದ ಹೇಳಿದರು.</p>.<p class="Subhead"><strong>ಮಾರುಕಟ್ಟೆ ಬಂದ್: </strong>ನಗರದ ಮೀನು ಮಾರುಕಟ್ಟೆ ಸತತ ಎರಡನೇ ದಿನವೂ ಮುಚ್ಚಿತ್ತು. ಇದರಿಂದ ಮೀನು ಖರೀದಿಗೆ ಬಂದವರು ನಿರಾಸೆಯಿಂದ ತೆರಳಿದರು.</p>.<p class="Subhead"><strong>ಭಾವಚಿತ್ರಗಳಿಗೆ ಚಪ್ಪಲಿಹಾರ:</strong>ಸಂಸದ ಅನಂತಕುಮಾರ ಹೆಗಡೆ ಹಾಗೂ ಶಾಸಕಿ ರೂಪಾಲಿ ನಾಯ್ಕ ಅವರ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅವರ ಭಾವಚಿತ್ರಗಳಿಗೆಸೆಗಣಿ ಎರಚಿ, ಚಪ್ಪಲಿಯಿಂದ ಹೊಡೆದರು. ಬಳಿಕ ಚಪ್ಪಲಿಯ ಹಾರ ಹಾಕಿದರು.</p>.<p class="Subhead"><strong>ಮುಂದುವರಿದಧರಣಿ:</strong>ಕಾಮಗಾರಿ ನಡೆಯುವ ಜಾಗದಲ್ಲಿ ಪ್ರತಿಭಟನೆ ನಡೆಸಿದ ನಂತರ ಮೀನುಗಾರರು ಜಿಲ್ಲಾಧಿಕಾರಿ ಕಚೇರಿಬಳಿಧರಣಿ ಕುಳಿತರು. ಶಾಸಕಿ ಮತ್ತು ಸಂಸದರ ಭಾವಚಿತ್ರಗಳನ್ನು ಸಂಕಲನ (ಎಡಿಟಿಂಗ್) ಮಾಡಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮಧ್ಯಾಹ್ನ 12ರಸುಮಾರಿಗೆ ಶುರುವಾದ ಧರಣಿಯು ಸಂಜೆಯವರೆಗೂ ಮುಂದುವರಿಯಿತು. ಬುಧವಾರವೂ ಪ್ರತಿಭಟಿಸಲಾಗುವುದುಎಂದು ಮೀನುಗಾರರ ಮುಖಂಡರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ತೀವ್ರ ವಿರೋಧದ ನಡುವೆಯೂ ಪ್ರಾರಂಭಗೊಂಡಿರುವ ಅಲೆ ತಡೆಗೋಡೆ ನಿರ್ಮಾಣ ಕಾಮಗಾರಿ ವಿರುದ್ಧ ಆಕ್ರೋಶಗೊಂಡ ಮೀನುಗಾರರ ಪ್ರತಿಭಟನೆಯು ಮಂಗಳವಾರವೂ ಮುಂದುವರಿಯಿತು.</p>.<p>‘ಸಾಗರಮಾಲಾ’ ಯೋಜನೆಯಡಿಯಲ್ಲಿ ಬಂದರು ವಿಸ್ತರಣೆಯ ಭಾಗವಾದ ಈ ಕಾಮಗಾರಿಗೆ ಸ್ಥಳೀಯರು ಹಾಗೂ ಮೀನುಗಾರರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಸೋಮವಾರ ಇಡೀ ದಿನ ಪ್ರತಿಭಟನೆ, ಅಂಗಡಿ ಮುಂಗಟ್ಟುಗಳ ಬಂದ್ನಿಂದ ಸ್ತಬ್ಧವಾಗಿದ್ದನಗರದಲ್ಲಿ ಎರಡನೇ ದಿನವೂ ಪ್ರತಿಭಟನೆ ನಡೆಯಿತು. ನಗರದಲ್ಲಿ ಜನಜೀವನ ಎಂದಿನಂತಿತ್ತು.</p>.<p>ಕಾಮಗಾರಿಯ ಸ್ಥಳದಲ್ಲಿಸೇರಿದನೂರಾರು ಪ್ರತಿಭಟನಾಕಾರರು, ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘ಇಡ್ಲಿ ಸಾಂಬಾರ್ ಅಚ್ಛಾ ಹೈ, ಬಿಜೆಪಿ ಸರ್ಕಾರ್ ಲುಚ್ಛಾ ಹೈ’ ಎಂಬ ಘೋಷಣೆಯೊಂದಿಗೆ ತಮ್ಮ ಸಿಟ್ಟನ್ನು ಹೊರಹಾಕಿದರು. ತಮ್ಮ ಬೇಡಿಕೆಗಳಿಗೆ ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಟೀಕಾಪ್ರಹಾರ ಮಾಡಿದರು.</p>.<p>‘ಪ್ರತಿಭಟನೆಗೆ ಇಳಿದವರ ಮೇಲೆ ಪೊಲೀಸರು ದಬ್ಬಾಳಿಕೆ ಮಾಡಿದ್ದಾರೆ.ನ್ಯಾಯಕ್ಕಾಗಿ ಹೋರಾಟ ಮಾಡಿದವರನ್ನುಬಂಧಿಸಿದ್ದಾರೆ. ನಮ್ಮ ಪ್ರಾಣ ಹೋದರೂ ಸರಿ, ಕಾರವಾರದ ಜನತೆಗೆ ಅನ್ಯಾಯವೆಸಗುವ ಈ ಕಾಮಗಾರಿ ನಡೆಯುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ. ನಮ್ಮ ಕಷ್ಟಕ್ಕೆ ಸ್ಪಂದಿಸದ ಜನಪ್ರತಿನಿಧಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ’ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.</p>.<p>‘ಮೀನುಗಾರಿಕೆಯನ್ನೇ ನಂಬಿ ನೂರಾರು ಕುಟುಂಬಗಳು ಜೀವನ ಸಾಗಿಸುತ್ತಿವೆ. ಆದರೆ, ಯಾರದೋ ಲಾಭಕ್ಕಾಗಿ ನಮ್ಮ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ. ಬಡ ಮೀನುಗಾರರಬದುಕನ್ನು ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ. ನಮ್ಮ ಅಸ್ತಿತ್ವಕ್ಕಾಗಿಒಗ್ಗಟ್ಟಿಂದನಾವು ಹೋರಾಡುತ್ತೇವೆ’ ಎಂದು ಪ್ರತಿಭಟನಾ ನಿರತ ಮಹಿಳೆಯರು ಆವೇಶದಿಂದ ಹೇಳಿದರು.</p>.<p class="Subhead"><strong>ಮಾರುಕಟ್ಟೆ ಬಂದ್: </strong>ನಗರದ ಮೀನು ಮಾರುಕಟ್ಟೆ ಸತತ ಎರಡನೇ ದಿನವೂ ಮುಚ್ಚಿತ್ತು. ಇದರಿಂದ ಮೀನು ಖರೀದಿಗೆ ಬಂದವರು ನಿರಾಸೆಯಿಂದ ತೆರಳಿದರು.</p>.<p class="Subhead"><strong>ಭಾವಚಿತ್ರಗಳಿಗೆ ಚಪ್ಪಲಿಹಾರ:</strong>ಸಂಸದ ಅನಂತಕುಮಾರ ಹೆಗಡೆ ಹಾಗೂ ಶಾಸಕಿ ರೂಪಾಲಿ ನಾಯ್ಕ ಅವರ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅವರ ಭಾವಚಿತ್ರಗಳಿಗೆಸೆಗಣಿ ಎರಚಿ, ಚಪ್ಪಲಿಯಿಂದ ಹೊಡೆದರು. ಬಳಿಕ ಚಪ್ಪಲಿಯ ಹಾರ ಹಾಕಿದರು.</p>.<p class="Subhead"><strong>ಮುಂದುವರಿದಧರಣಿ:</strong>ಕಾಮಗಾರಿ ನಡೆಯುವ ಜಾಗದಲ್ಲಿ ಪ್ರತಿಭಟನೆ ನಡೆಸಿದ ನಂತರ ಮೀನುಗಾರರು ಜಿಲ್ಲಾಧಿಕಾರಿ ಕಚೇರಿಬಳಿಧರಣಿ ಕುಳಿತರು. ಶಾಸಕಿ ಮತ್ತು ಸಂಸದರ ಭಾವಚಿತ್ರಗಳನ್ನು ಸಂಕಲನ (ಎಡಿಟಿಂಗ್) ಮಾಡಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮಧ್ಯಾಹ್ನ 12ರಸುಮಾರಿಗೆ ಶುರುವಾದ ಧರಣಿಯು ಸಂಜೆಯವರೆಗೂ ಮುಂದುವರಿಯಿತು. ಬುಧವಾರವೂ ಪ್ರತಿಭಟಿಸಲಾಗುವುದುಎಂದು ಮೀನುಗಾರರ ಮುಖಂಡರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>