<p><strong>ಯಲ್ಲಾಪುರ: </strong>ತಾಲ್ಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭಾನುವಾರ ಕಾರು, ಲಾರಿ ಹಾಗೂ ಟ್ಯಾಂಕರ್ ನಡುವೆ ಸರಣಿ ಅಪಘಾತ ನಡೆದು, ಎರಡು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.</p>.<p>ಸಿಮೆಂಟ್ ತುಂಬಿಕೊಂಡು.ಅಂಕೋಲಾ ಕಡೆಗೆ ತೆರಳುತ್ತಿದ್ದ ಲಾರಿಯೊಂದು ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯಿತು. ಇದರ ಪರಿಣಾಮ ನಜ್ಜುಗುಜ್ಜಾದ ಟ್ಯಾಂಕರಿನಲ್ಲಿ ಸಿಲುಕಿಕೊಂಡಿದ್ದ ಚಾಲಕನನ್ನು ಹರ ಸಾಹಸ ಪಟ್ಟು ಹೊರ ತೆಗೆಯಲಾಯಿತು. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.</p>.<p>ಅಪಘಾತಗೊಂಡ ಲಾರಿಗಳು ಹೆದ್ದಾರಿಗೆ ಅಡ್ಡಲಾಗಿ ನಿಂತ ಪರಿಣಾಮ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ರಸ್ತೆಯ ಎರಡೂ ಬದಿಗಳಲ್ಲಿ ಸುಮಾರು ಎರಡು ಕಿಲೋಮೀಟರ್ ದೂರದವರೆಗೆ ಎರಡು ಸಾಲುಗಳಲ್ಲಿ ವಾಹನಗಳು ನಿಂತಿದ್ದವು.<br /><br />ಯಲ್ಲಾಪುರ ಪೊಲೀಸರು ಸ್ಥಳಕ್ಕೆ ತೆರಳಿ ಕ್ರೇನ್ ಮೂಲಕ ಟ್ಯಾಂಕರ್ ಮತ್ತು ಲಾರಿಯನ್ನು ಬದಿಗೆ ಸರಿಸಿದ ನಂತರದಲ್ಲಿ ಸಂಚಾರ ಆರಂಭಗೊಂಡಿತು. ಸರಣಿ ರಜೆಯ ಕಾರಣಕ್ಕೆ ನೂರಾರು ವಾಹನಗಳಲ್ಲಿ ಬಂದಿದಗದ ಪ್ರವಾಸಿಗರು ಸಂಚಾರ ಸ್ಥಗಿತದಿಂದ ಪರದಾಡುವಂತಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ: </strong>ತಾಲ್ಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭಾನುವಾರ ಕಾರು, ಲಾರಿ ಹಾಗೂ ಟ್ಯಾಂಕರ್ ನಡುವೆ ಸರಣಿ ಅಪಘಾತ ನಡೆದು, ಎರಡು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.</p>.<p>ಸಿಮೆಂಟ್ ತುಂಬಿಕೊಂಡು.ಅಂಕೋಲಾ ಕಡೆಗೆ ತೆರಳುತ್ತಿದ್ದ ಲಾರಿಯೊಂದು ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯಿತು. ಇದರ ಪರಿಣಾಮ ನಜ್ಜುಗುಜ್ಜಾದ ಟ್ಯಾಂಕರಿನಲ್ಲಿ ಸಿಲುಕಿಕೊಂಡಿದ್ದ ಚಾಲಕನನ್ನು ಹರ ಸಾಹಸ ಪಟ್ಟು ಹೊರ ತೆಗೆಯಲಾಯಿತು. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.</p>.<p>ಅಪಘಾತಗೊಂಡ ಲಾರಿಗಳು ಹೆದ್ದಾರಿಗೆ ಅಡ್ಡಲಾಗಿ ನಿಂತ ಪರಿಣಾಮ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ರಸ್ತೆಯ ಎರಡೂ ಬದಿಗಳಲ್ಲಿ ಸುಮಾರು ಎರಡು ಕಿಲೋಮೀಟರ್ ದೂರದವರೆಗೆ ಎರಡು ಸಾಲುಗಳಲ್ಲಿ ವಾಹನಗಳು ನಿಂತಿದ್ದವು.<br /><br />ಯಲ್ಲಾಪುರ ಪೊಲೀಸರು ಸ್ಥಳಕ್ಕೆ ತೆರಳಿ ಕ್ರೇನ್ ಮೂಲಕ ಟ್ಯಾಂಕರ್ ಮತ್ತು ಲಾರಿಯನ್ನು ಬದಿಗೆ ಸರಿಸಿದ ನಂತರದಲ್ಲಿ ಸಂಚಾರ ಆರಂಭಗೊಂಡಿತು. ಸರಣಿ ರಜೆಯ ಕಾರಣಕ್ಕೆ ನೂರಾರು ವಾಹನಗಳಲ್ಲಿ ಬಂದಿದಗದ ಪ್ರವಾಸಿಗರು ಸಂಚಾರ ಸ್ಥಗಿತದಿಂದ ಪರದಾಡುವಂತಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>