ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು, ಲಾರಿ, ಟ್ಯಾಂಕರ್ ಸರಣಿ ಅಪಘಾತ: ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ

Last Updated 24 ಜನವರಿ 2021, 5:32 IST
ಅಕ್ಷರ ಗಾತ್ರ

ಯಲ್ಲಾಪುರ: ತಾಲ್ಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭಾನುವಾರ ಕಾರು, ಲಾರಿ ಹಾಗೂ ಟ್ಯಾಂಕರ್ ನಡುವೆ ಸರಣಿ ಅಪಘಾತ ನಡೆದು, ಎರಡು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಸಿಮೆಂಟ್ ತುಂಬಿಕೊಂಡು.ಅಂಕೋಲಾ ಕಡೆಗೆ ತೆರಳುತ್ತಿದ್ದ ಲಾರಿಯೊಂದು ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯಿತು. ಇದರ ಪರಿಣಾಮ ನಜ್ಜುಗುಜ್ಜಾದ ಟ್ಯಾಂಕರಿನಲ್ಲಿ ಸಿಲುಕಿಕೊಂಡಿದ್ದ ಚಾಲಕನನ್ನು ಹರ ಸಾಹಸ ಪಟ್ಟು ಹೊರ ತೆಗೆಯಲಾಯಿತು. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.

ಅಪಘಾತಗೊಂಡ ಲಾರಿಗಳು ಹೆದ್ದಾರಿಗೆ ಅಡ್ಡಲಾಗಿ ನಿಂತ ಪರಿಣಾಮ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ರಸ್ತೆಯ ಎರಡೂ ಬದಿಗಳಲ್ಲಿ ಸುಮಾರು ಎರಡು ಕಿಲೋಮೀಟರ್ ದೂರದವರೆಗೆ ಎರಡು ಸಾಲುಗಳಲ್ಲಿ ವಾಹನಗಳು ನಿಂತಿದ್ದವು.

ಯಲ್ಲಾಪುರ ಪೊಲೀಸರು ಸ್ಥಳಕ್ಕೆ ತೆರಳಿ ಕ್ರೇನ್ ಮೂಲಕ ಟ್ಯಾಂಕರ್ ಮತ್ತು ಲಾರಿಯನ್ನು ಬದಿಗೆ ಸರಿಸಿದ ನಂತರದಲ್ಲಿ ಸಂಚಾರ ಆರಂಭಗೊಂಡಿತು. ಸರಣಿ ರಜೆಯ ಕಾರಣಕ್ಕೆ ನೂರಾರು ವಾಹನಗಳಲ್ಲಿ ಬಂದಿದಗದ ಪ್ರವಾಸಿಗರು ಸಂಚಾರ ಸ್ಥಗಿತದಿಂದ ಪರದಾಡುವಂತಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT