ಧಾರ್ಮಿಕ ಸ್ಥಳಗಳಲ್ಲಿ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲು ಅವಕಾಶ ನೀಡಿದ್ದು ಭಕ್ತರ ಸಂತಸಕ್ಕೆ ಕಾರಣವಾಗಿದೆ. ಜಿಲ್ಲೆಯ ಪ್ರಸಿದ್ಧ ದೇಗುಲಗಳಾದ ಮುರುಡೇಶ್ವರ, ಗೋಕರ್ಣ, ಶಿರಸಿಯ ಮಾರಿಕಾಂಬಾ ಗುಡಿ ಸೇರಿದಂತೆ ವಿವಿಧೆಡೆಗೆ ನಿತ್ಯವೂ ನೂರಾರು ಭಕ್ತರು ಭೇಟಿ ನೀಡುತ್ತಾರೆ. ಆದರೆ, ಹೇಳಿಕೊಂಡ ಹರಕೆ, ಸೇವಾ ಕಾರ್ಯಗಳನ್ನು ಸಲ್ಲಿಸಲು ಅವಕಾಶ ಸಿಗದೇ ನಿರಾಸೆಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ದೂರದ ಊರುಗಳಿಂದ ಬರುವವರು ತಮ್ಮ ಪ್ರಯಾಣವನ್ನು ಮುಂದೂಡಿದ್ದರು. ಸ್ಥಳೀಯ ಧಾರ್ಮಿಕ ಪ್ರವಾಸೋದ್ಯಮದ ಮೇಲೂ ಇದು ಪರಿಣಾಮ ಬೀರಿತ್ತು. ಈಗ ಎಲ್ಲರೂ ನಿಟ್ಟುಸಿರು ಬಿಡುವಂತಾಗಿದೆ.