ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀವ್ ಗಾಂಧಿ ಹೆಸರನ್ನು ಬದಲಿಸಿ ಶಂಕರಾಚಾರ್ಯರ ಹೆಸರಿಡುವುದು ಸೂಕ್ತ- ಕರಂದ್ಲಾಜೆ

Last Updated 18 ಸೆಪ್ಟೆಂಬರ್ 2021, 14:43 IST
ಅಕ್ಷರ ಗಾತ್ರ

ಕೈಗಡಿ (ಅಂಕೋಲಾ, ಉತ್ತರ ಕನ್ನಡ): 'ಶೃಂಗೇರಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ರಾಜೀವ್ ಗಾಂಧಿ ಹೆಸರನ್ನು ಬದಲಾಯಿಸಿ ಶಂಕರಾಚಾರ್ಯರ ಹೆಸರು ನಾಮಕರಣ ಮಾಡುವುದು ಸೂಕ್ತ' ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.

ಅಂಕೋಲಾ ತಾಲ್ಲೂಕಿನ ಕೈಗಡಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ವಿಶ್ವವಿದ್ಯಾಲಯದ ಹೆಸರು ಬದಲಿಸಬೇಕು ಎಂಬ ಬೇಡಿಕೆಯಿದೆ. ಈ ಬಗ್ಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಿದರೆ ಪರಿಶೀಲಿಸಲು ಕೇಂದ್ರದ ಸಂಸ್ಕೃತಿ ಖಾತೆ ಸಚಿವರಿಗೆ ಒತ್ತಡ ತರುತ್ತೇನೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT