ಮಳೆಗಾಲ, ಮತ್ಸ್ಯಕ್ಷಾಮ, ಲಾಕ್ಡೌನ್ ಹೀಗೆ ವಿವಿಧ ಕಾರಣಗಳಿಂದ ಮೀನುಗಾರಿಕೆ ಸ್ಥಗಿತವಾಗಿತ್ತು. ಇದರಿಂದ ದುಡಿಮೆ ಇಲ್ಲದೇ ಮೀನುಗಾರರು ಕಂಗಾಲಾಗಿದ್ದಾರೆ. ಇದರ ಜೊತೆ ಅಳಿವೆಯಲ್ಲಿನ ಹೂಳಿನ ಸಮಸ್ಯೆಯೂ ಕಾಡುತ್ತಿದೆ. ಅಳಿವೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅವಘಡವನ್ನು ತಪ್ಪಿಸಲು ತಕ್ಷಣ ಹೂಳೆತ್ತಲು ಕ್ರಮ ಕೈಗೊಳ್ಳಬೇಕು ಎಂದು ಮೀನುಗಾರರು ಮತ್ತು ವಿವಿಧ ಸಂಘ ಸಂಸ್ಥೆಗಳು ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿವೆ. ಆದರೆ, ಪ್ರಯೋಜನವಾಗಲಿಲ್ಲ ಎಂಬ ಬೇಸರ ಅವರದ್ದಾಗಿದೆ.