ನಗರದಲ್ಲಿ ಮಾಧ್ಯಮಗಳ ಜತೆ ಶನಿವಾರ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ರಚನೆಗೆ ಬಲ ನೀಡಿದ ಸಚಿವರನ್ನು ಗುರಿಯಾಗಿಸಿ ಅವರನ್ನೇ ಬೆದರಿಸುವ ಪ್ರಯತ್ನ ನಡೆದಿದೆ. ಅದಕ್ಕಾಗಿ ನ್ಯಾಯಾಲಯದ ಮೊರೆ ಹೋಗುವ ಅನಿವಾರ್ಯತೆ ಎದುರಾಯಿತು’ ಎಂದರು.
‘ರಾಜಕೀಯ ಜೀವನದ ಹೊರತಾಗಿ ನಮಗೂ ವೈಯಕ್ತಿಕ ಜೀವನವಿದೆ. ನಮಗೂ ಕುಟುಂಬ, ಮಕ್ಕಳಿದ್ದಾರೆ. ಯಾವ ವ್ಯಕ್ತಿಯ ವೈಯಕ್ತಿಕ ತೇಜೋವಧೆ, ಗೌರವ ಹಾಳುಮಾಡುವ ಕೆಲಸ ಒಳ್ಳೆಯ ಬೆಳವಣಿಗೆಯಲ್ಲ. ಇದು ಯಾವ ರಾಜಕೀಯ ಪಕ್ಷಕ್ಕೂ ಶೋಭೆ ತರುವಂತದ್ದಲ್ಲ’ ಎಂದರು.