ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎರಡೂವರೆ ತಿಂಗಳ ರಾಜಕಾರಣವು ರಾಜ್ಯ, ದೇಶದಲ್ಲಿ ಸಂಚಲನ ಮೂಡಿಸಿದೆ. ಸ್ವಯಂ ಘೋಷಿತ ಬುದ್ಧಿವಂತ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಮನಸ್ಸಿಗೆ ಬಂದಂತೆ ನಿರ್ಣಯ ತೆಗೆದುಕೊಂಡಿದ್ದಾರೆ. ರಾಜಕೀಯ ದ್ವೇಷದ ಕ್ರಮ ಇದಾಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರು, ನಾಯಕರ ಒತ್ತಾಯಕ್ಕೆ ಒಳಗಾಗಿ, ಅವರನ್ನು ಒಲೈಕೆ ಮಾಡಲು ಹೀಗೆ ಮಾಡಲಾಗಿದೆ. ನ್ಯಾಯಾಲಯದ ವಿಚಾರಣೆ ಮುಗಿದ ನಂತರ ಕಾಂಗ್ರೆಸ್ ನಾಯಕರ ಒತ್ತಡದ ಕುರಿತು ಹೆಚ್ಚಿನ ಮಾಹಿತಿ ನೀಡಲಾಗುವುದು’ ಎಂದು ಹೇಳಿದರು.