ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಿರಿಯ ಎಂಜಿನಿಯರ್ ಪ್ರಶಾಂತ ಕೆ. ನಾಯ್ಕ ಭೇಟಿ ನೀಡಿದರು. ಸಿ.ಪಿ.ಐ ಸಂತೋಷ ಶೆಟ್ಟಿ, ಪಿ.ಎಸೈ ಪ್ರವೀಣ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹೆದ್ದಾರಿ ಕುಸಿದ ಪ್ರದೇಶದಲ್ಲಿ ಬ್ಯಾರಿಕೇಡ್ ಅಳವಡಿಸಿ, ಕಂದಕದ ಸಮೀಪದಲ್ಲಿ ವಾಹನಗಳು ಚಲಿಸದಂತೆ ನಿರ್ಬಂಧಿಸಿದರು. ಸ್ಥಳದಲ್ಲಿ ಎಚ್ಚರಿಕೆ ಪಟ್ಟಿ ಹಾಗೂ ಸೂಚನಾ ಫಲಕ ಅಳವಡಿಸಲಾಗಿದೆ.