ಈ ತಳಿಯ ಗುಣಮಟ್ಟ ಹಾಗೂ ವೈಶಿಷ್ಟ್ಯವನ್ನು ಪರಿಶೀಲಿಸಿ, ಅದನ್ನು ನೋಂದಣಿ ಮಾಡಿಸುವುದಕ್ಕೆ ಅಪ್ಪಂಗಳದ ಏಲಕ್ಕಿ ಸಂಶೋಧನಾ ಕೇಂದ್ರದ ನಿವೃತ್ತ ವಿಜ್ಞಾನಿ ಡಾ.ವೇಣುಗೋಪಾಲ, ಕೊಚ್ಚಿಯ ಕೋಕೋ ಹಾಗೂ ಗೇರು ನಿರ್ದೇಶನಾಲಯದ ಕೇಂದ್ರದ ಉಪ ನಿರ್ದೇಶಕ ಬಾಬಾ ಸಾಹೇಬ ದೇಸಾಯಿ ಹೆಚ್ಚಿನ ಸಹಕಾರ ನೀಡಿದ್ದಾರೆ. ಮಹಾಬಲೇಶ್ವರ, ಎಚ್.ಜಿ.ಅರುಣ ಮತ್ತಿತರ ಸ್ಥಳೀಯ ತೋಟಗಾರಿಕಾ ಅಧಿಕಾರಿಗಳು ಮಾರ್ಗದರ್ಶನ ನೀಡಿದ್ದಾರೆ.