<p><strong>ಶಿರಸಿ:</strong> ಇಲ್ಲಿನ ಅಂಬೇಡ್ಕರ ಭವನದಲ್ಲಿ ಬುಧವಾರ ನಡೆದ ರಾಜೀವ್ ಗಾಂಧಿ ಪಂಚಾಯತ್ರಾಜ್ ಸಂಘಟನೆಯ ಜಿಲ್ಲಾ ಸಮಾವೇಶ ಹಳಿಯಾಳ ಕ್ಷೇತ್ರದ ರಾಜಕೀಯ ಜಟಾಪಟಿಗೆ ಕಾರಣವಾಯಿತು.</p>.<p>ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ್ ಭಾಷಣದ ವೇಳೆ ‘ಕಾಂಗ್ರೆಸ್ಸಿಗರಿಗೆ ಕಾಂಗ್ರೆಸ್ಸಿಗರೇ ಶತ್ರುಗಳು. ಬಿಜೆಪಿಯವರನ್ನು ಕರೆತಂದರೆ ಅದಕ್ಕೆ ತಡೆ ನೀಡಲಾಗುತ್ತದೆ. ನಲ್ವತ್ತು ವರ್ಷ ಇಲ್ಲದ ನಿಯಮ ಈಗ ಹಳಿಯಾಳ ಕಾಂಗ್ರೆಸ್ಸಿನಲ್ಲಿ ಹೇರಲಾಗುತ್ತಿದೆ’ ಎಂದು ಅಸಮಾಧಾನ ತೋಡಿಕೊಂಡರು.</p>.<p>‘ನನಗೆ ಪಂಚಾಯತ್ರಾಜ್ ವ್ಯವಸ್ಥೆ ಬಗ್ಗೆ ಹೆಚ್ಚು ಗೊತ್ತಿಲ್ಲ. ಅದನ್ನು ನಾನು ಅಧ್ಯಯನ ಮಾಡಿಲ್ಲ’ ಎಂದೂ ಹೇಳಿದ್ದರು.</p>.<p>ಘೋಟ್ನೇಕರ್ ಮಾತು ಸಭೆಯಲ್ಲಿದ್ದ ಶಾಸಕ ಆರ್.ವಿ.ದೇಶಪಾಂಡೆ ಬೆಂಬಲಿಗರನ್ನು ಕೆಣಕಿತು. ಪಂಚಾಯತ್ರಾಜ್ ವ್ಯವಸ್ಥೆ ಗೊತ್ತಿಲ್ಲದವರನ್ನು ಎರಡು ಬಾರಿ ಎಂ.ಎಲ್.ಸಿ. ಮಾಡಿ ತಪ್ಪು ಮಾಡಿದೆವು ಎಂದು ಹಳಿಯಾಳದ ಕೆಲ ಸದಸ್ಯರು ಅಸಮಾಧಾನ ತೋಡಿಕೊಂಡರು.</p>.<p>ದೇಶಪಾಂಡೆ ಪರ ಕೆಲವರು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಘೋಟ್ನೇಕರ್ ಬೆಂಬಲಿಗರ ಘೋಷಣೆ ಮೊಳಗಿತು. ಇದು ಸಭೆಯಲ್ಲಿ ಕೆಲಹೊತ್ತು ಗೊಂದಲಕ್ಕೆ ಕಾರಣವಾಯಿತು.</p>.<p>ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಭೀಮಣ್ಣ ನಾಯ್ಕ ಮತ್ತಿತರರು ಪರಿಸ್ಥಿತಿ ತಿಳಿಗೊಳಿಸಿದರು.</p>.<p>ಎರಡು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿರುವ ಎಸ್.ಎಲ್.ಘೋಟ್ನೇಕರ್ ಮುಂಬರುವ ವಿಧಾನಸಭಾ ಚುನಾವಣೆಗೆ ಹಳಿಯಾಳ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಹಾಲಿ ಶಾಸಕ ಆರ್.ವಿ.ದೇಶಪಾಂಡೆ ವಿರುದ್ಧ ಬಹಿರಂಗ ಹೇಳಿಕೆಯನ್ನೂ ನೀಡಿದ್ದಾರೆ. ಹೀಗಾಗಿ ಅವರ ಬೆಂಬಲಿಗರ ನಡುವೆ ಗುದ್ದಾಟ ಹೆಚ್ಚಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಇಲ್ಲಿನ ಅಂಬೇಡ್ಕರ ಭವನದಲ್ಲಿ ಬುಧವಾರ ನಡೆದ ರಾಜೀವ್ ಗಾಂಧಿ ಪಂಚಾಯತ್ರಾಜ್ ಸಂಘಟನೆಯ ಜಿಲ್ಲಾ ಸಮಾವೇಶ ಹಳಿಯಾಳ ಕ್ಷೇತ್ರದ ರಾಜಕೀಯ ಜಟಾಪಟಿಗೆ ಕಾರಣವಾಯಿತು.</p>.<p>ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ್ ಭಾಷಣದ ವೇಳೆ ‘ಕಾಂಗ್ರೆಸ್ಸಿಗರಿಗೆ ಕಾಂಗ್ರೆಸ್ಸಿಗರೇ ಶತ್ರುಗಳು. ಬಿಜೆಪಿಯವರನ್ನು ಕರೆತಂದರೆ ಅದಕ್ಕೆ ತಡೆ ನೀಡಲಾಗುತ್ತದೆ. ನಲ್ವತ್ತು ವರ್ಷ ಇಲ್ಲದ ನಿಯಮ ಈಗ ಹಳಿಯಾಳ ಕಾಂಗ್ರೆಸ್ಸಿನಲ್ಲಿ ಹೇರಲಾಗುತ್ತಿದೆ’ ಎಂದು ಅಸಮಾಧಾನ ತೋಡಿಕೊಂಡರು.</p>.<p>‘ನನಗೆ ಪಂಚಾಯತ್ರಾಜ್ ವ್ಯವಸ್ಥೆ ಬಗ್ಗೆ ಹೆಚ್ಚು ಗೊತ್ತಿಲ್ಲ. ಅದನ್ನು ನಾನು ಅಧ್ಯಯನ ಮಾಡಿಲ್ಲ’ ಎಂದೂ ಹೇಳಿದ್ದರು.</p>.<p>ಘೋಟ್ನೇಕರ್ ಮಾತು ಸಭೆಯಲ್ಲಿದ್ದ ಶಾಸಕ ಆರ್.ವಿ.ದೇಶಪಾಂಡೆ ಬೆಂಬಲಿಗರನ್ನು ಕೆಣಕಿತು. ಪಂಚಾಯತ್ರಾಜ್ ವ್ಯವಸ್ಥೆ ಗೊತ್ತಿಲ್ಲದವರನ್ನು ಎರಡು ಬಾರಿ ಎಂ.ಎಲ್.ಸಿ. ಮಾಡಿ ತಪ್ಪು ಮಾಡಿದೆವು ಎಂದು ಹಳಿಯಾಳದ ಕೆಲ ಸದಸ್ಯರು ಅಸಮಾಧಾನ ತೋಡಿಕೊಂಡರು.</p>.<p>ದೇಶಪಾಂಡೆ ಪರ ಕೆಲವರು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಘೋಟ್ನೇಕರ್ ಬೆಂಬಲಿಗರ ಘೋಷಣೆ ಮೊಳಗಿತು. ಇದು ಸಭೆಯಲ್ಲಿ ಕೆಲಹೊತ್ತು ಗೊಂದಲಕ್ಕೆ ಕಾರಣವಾಯಿತು.</p>.<p>ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಭೀಮಣ್ಣ ನಾಯ್ಕ ಮತ್ತಿತರರು ಪರಿಸ್ಥಿತಿ ತಿಳಿಗೊಳಿಸಿದರು.</p>.<p>ಎರಡು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿರುವ ಎಸ್.ಎಲ್.ಘೋಟ್ನೇಕರ್ ಮುಂಬರುವ ವಿಧಾನಸಭಾ ಚುನಾವಣೆಗೆ ಹಳಿಯಾಳ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಹಾಲಿ ಶಾಸಕ ಆರ್.ವಿ.ದೇಶಪಾಂಡೆ ವಿರುದ್ಧ ಬಹಿರಂಗ ಹೇಳಿಕೆಯನ್ನೂ ನೀಡಿದ್ದಾರೆ. ಹೀಗಾಗಿ ಅವರ ಬೆಂಬಲಿಗರ ನಡುವೆ ಗುದ್ದಾಟ ಹೆಚ್ಚಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>