ಕಾರವಾರ: ಉತ್ತರ ಕನ್ನಡದಲ್ಲಿ ಮಂಗಳವಾರವೂ ಮಳೆಯ ಅಬ್ಬರ ಮುಂದುವರಿದಿದೆ. ಕಾರವಾರದಲ್ಲಿ ಆಗಾಗ ಜೋರಾದ ಗಾಳಿಯೊಂದಿಗೆ ರಭಸದ ಮಳೆ ಬೀಳುತ್ತಿದೆ.
ಕಾರವಾರ ತಾಲ್ಲೂಕಿನ ಮುದಗಾದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ಪಾಸ್ನಲ್ಲಿ ನೀರು ನಿಂತಿದೆ. ವಾಹನ ಸವಾರರು ಪರದಾಡುವಂತಾಗಿದೆ.
ಶಿರಸಿ-ಕುಮಟಾ ರಸ್ತೆಯ ಹೆಗಡೆಕಟ್ಟಾ ಕ್ರಾಸ್ ಬಳಿ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದ್ದು, ಸ್ವಲ್ಪ ಹೊತ್ತು ಸಂಚಾರಕ್ಕೆ ಅಡ್ಡಿಯಾಯಿತು. ಶಿರಸಿಯ ಮುಸ್ಲಿಂ ಗಲ್ಲಿಯ ಅಮೀನಾಬಿ ಎಂಬುವವರ ಮನೆಯ ಗೋಡೆ ಕುಸಿದಿದೆ.