ಭಾನುವಾರ ದೇವಾಲಯದಲ್ಲಿ ನಡೆದ ಜಾತ್ರಾ ಮುಹೂರ್ತ ನಿಗದಿ ಸಭೆಯಲ್ಲಿ ಅರ್ಚಕ ಶರಣ ಆಚಾರ್ಯ ಜಾತ್ರೆಯ ದಿನಾಂಕ ಘೋಷಿಸಿದರು. ವಿಕಾರಿನಾಮ ಸಂವತ್ಸರದ ಫಾಲ್ಗುಣ ಶುಕ್ಲ ಅಷ್ಟಮಿಯಂದು ಜಾತ್ರೆ ಆರಂಭವಾಗಲಿದೆ. ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದ ಪೂರ್ವ ವಿಧಿ–ವಿಧಾನಗಳು ಜ.22ರಿಂದ ಪ್ರಾರಂಭವಾಗಲಿವೆ. ಜ.22ರಂದು ದೇವಿಯ ಪ್ರತಿಷ್ಠಾ ಮಂಟಪ ಕಳಚುವುದು, ಫೆ.11ರಂದು ಪೂರ್ವದಿಕ್ಕಿಗೆ ಮೊದಲ ಹೊರಬೀಡು, ಫೆ.14ರಂದು ಉತ್ತರ ದಿಕ್ಕಿಗೆ 2ನೇ ಹೊರಬೀಡು, ಫೆ.18ರಂದು ಪೂರ್ವ ದಿಕ್ಕಿಗೆ 3ನೇ ಹೊರಬೀಡು, ಫೆ.21ರಂದು ರಥ ಕಟ್ಟಲು ಮರ ಕಡಿಯಲು ಹೋಗುವುದು, ಅದೇ ದಿನ ಉತ್ತರ ದಿಕ್ಕಿಗೆ 4ನೇ ಹೊರಬೀಡು, ಫೆ.25 ರಥದ ಮರ ತರುವುದು, ಅದೇ ದಿನ ರಾತ್ರಿ ಪೂರ್ವದಿಕ್ಕಿಗೆ ಅಂಕೆಯ ಹೊರಬೀಡು ನಡೆಯಲಿದೆ.ಫೆ.26ರಂದು ಅಂಕೆ ಹಾಕುವುದು, ದೇವಿಯ ವಿಸರ್ಜನೆ ನಡೆಯಲಿದೆ.