ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಕುಟುಂಬಕ್ಕೆ ತ್ವರಿತವಾಗಿ ಪರಿಹಾರ ಸಿಗಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು. ಸಚಿವರ ಸೂಚನೆ ಪಾಲಿಸಿದ ಅಧಿಕಾರಿಗಳು ಪರಿಹಾರಧನದ ಚೆಕ್ ಸಿದ್ಧಪಡಿಸಿದ್ದು, ಬುಧವಾರ ಬೆಳಿಗ್ಗೆ 9.30ರ ವೇಳೆಗೆ ಸಚಿವರು ಮೃತರ ತಂದೆಗೆ ಚೆಕ್ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಅಧಿಕಾರಿಗಳು ಇದ್ದರು.