<p><strong>ಕಾರವಾರ: </strong>ಶಿರಸಿ–ಕುಮಟಾ ನಡುವಿನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ (ಸಂಖ್ಯೆ 766ಇ) ಮರಗಳನ್ನು ತೆರವು ಮಾಡುತ್ತಿರುವುದು ಪರಿಸರವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಅಂತಿಮ ಅನುಮತಿ ಸಿಗುವ ಮೊದಲೇ ಕಾಮಗಾರಿ ಆರಂಭಿಸಲಾಗಿದೆ ಎಂದು ಬೆಂಗಳೂರಿನ ‘ಯುನೈಟೆಡ್ ಕನ್ಸರ್ವೇಷನ್ ಮೂವ್ಮೆಂಟ್’ (ಯು.ಸಿ.ಎಂ) ಸಂಘಟನೆಯು ದೂರಿದೆ.</p>.<p>ಹೆದ್ದಾರಿ ವಿಸ್ತರಣೆಗಾಗಿ ಮರಗಳನ್ನು ತೆರವು ಮಾಡದಂತೆ 2020ರ ಡಿ.22ರಂದು ರಾಜ್ಯ ಹೈಕೋರ್ಟ್ನಲ್ಲಿ ಸಂಘಟನೆಯು ಅರ್ಜಿ ಸಲ್ಲಿಸಿತ್ತು. ಅದನ್ನು ಆಧರಿಸಿ ನ್ಯಾಯಾಲಯವು ರಾಷ್ಟ್ರೀಯ ಹೆದ್ದಾರಿ ಪ್ರಾಧಿ<br />ಕಾರಕ್ಕೆ (ಎನ್.ಎಚ್.ಎ.ಐ) ಜನವರಿ 5ರಂದು ನೋಟಿಸ್<br />ಜಾರಿ ಮಾಡಿತ್ತು. ಅರಣ್ಯ<br />ಸಚಿವಾಲಯವು ಕಾಮಗಾರಿಗೆ 2020ರ ಸೆ.23ರಂದು ನೀಡಿದ ಮೊದಲ ಹಂತದ ಅನುಮತಿಯನ್ನೇ ಮುಂದಿಟ್ಟುಕೊಂಡು ಕಾಮಗಾರಿ ಆರಂಭಿಸಲಾಗಿದೆ. ಆದರೆ, ಮರಗಳನ್ನು ಕತ್ತರಿಸುವ ಮೊದಲು ಎನ್.ಎಚ್.ಎ.ಐ ಹಾಗೂ ಅರಣ್ಯ ಇಲಾಖೆಯು ಹೈಕೋರ್ಟ್ನಿಂದ ಅನುಮತಿ ಪಡೆದಿಲ್ಲ ಎಂದು ಆರೋಪಿಸಿದೆ.</p>.<p>ತರಾತುರಿಯಲ್ಲಿ ಮರಗಳನ್ನು ಕಡಿದು ಹಾಕುವುದು ನ್ಯಾಯಾಲಯಕ್ಕೆ ಅಗೌರವ ತೋರಿದಂತಾಗುತ್ತದೆ. ಈ ಎಲ್ಲ ಅಂಶಗಳೂ ಎರಡೂ ಇಲಾಖೆಗಳ ಅಧಿಕಾರಿಗಳಿಗೆ ತಿಳಿದಿದೆ. ಆದರೂ ಕಾಮಗಾರಿ ಮುಂದುವರಿಸಿರುವುದು ಸರಿಯಲ್ಲ. ಮರಗಳನ್ನು ತೆರವು ಮಾಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಸಂಘಟನೆಯು ಆಗ್ರಹಿಸಿದೆ.</p>.<p>ಒಟ್ಟು 58.92 ಕಿ.ಮೀ. ರಾಜ್ಯ ಹೆದ್ದಾರಿಯನ್ನು ₹ 440.16 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಕೇಂದ್ರ ಸರ್ಕಾರದ ‘ಸಾಗರಮಾಲಾ’ ಯೋಜನೆಯಡಿ ತಡಸ– ಬೇಲೆಕೇರಿ ಸಂಪರ್ಕಿಸುವ ರಸ್ತೆ ಇದಾಗಿದೆ. ಶಿರಸಿ ಮತ್ತು ಹೊನ್ನಾವರ ಅರಣ್ಯ ವಲಯದಲ್ಲಿ ಈ ರಸ್ತೆ ಸಾಗುತ್ತದೆ.</p>.<p>ರಸ್ತೆಯು ಹಾದುಹೋಗುವ ಪ್ರದೇಶವು ಪಶ್ಚಿಮಘಟ್ಟವಾಗಿದ್ದು, ಅಮೂಲ್ಯ ಪ್ರಾಕೃತಿಕ ಸಂಪತ್ತನ್ನೊಳಗೊಂಡಿದೆ. ಹಾಗಾಗಿ ರಸ್ತೆ ವಿಸ್ತರಣೆ ಮಾಡದಂತೆ ಪರಿಸರವಾದಿಗಳು ಆಕ್ಷೇಪವೆತ್ತಿದ್ದರು. ಇದರಿಂದ ಎರಡು ವರ್ಷಗಳ ಹಿಂದೆ ಗುತ್ತಿಗೆ ಆಗಿದ್ದರೂ ಕಾಮಗಾರಿ ವಿಳಂಬವಾಗಿತ್ತು. ಬಳಿಕ ರಸ್ತೆ ವಿಸ್ತರಣೆಯ ಪ್ರಮಾಣವನ್ನು ಕಡಿಮೆ ಮಾಡಿದ ಎನ್.ಎಚ್.ಎ.ಐ, ಪುನಃ ಕೇಂದ್ರ ಅರಣ್ಯ ಸಚಿವಾಲಯಕ್ಕೆ ಅರ್ಜಿ ಸಲ್ಲಿಸಿತು. ಈ ಪ್ರಸ್ತಾವಕ್ಕೆ 2020ರ ಸೆ.19ರಂದು ಸಚಿವಾಲಯವು ಒಪ್ಪಿಗೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಶಿರಸಿ–ಕುಮಟಾ ನಡುವಿನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ (ಸಂಖ್ಯೆ 766ಇ) ಮರಗಳನ್ನು ತೆರವು ಮಾಡುತ್ತಿರುವುದು ಪರಿಸರವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಅಂತಿಮ ಅನುಮತಿ ಸಿಗುವ ಮೊದಲೇ ಕಾಮಗಾರಿ ಆರಂಭಿಸಲಾಗಿದೆ ಎಂದು ಬೆಂಗಳೂರಿನ ‘ಯುನೈಟೆಡ್ ಕನ್ಸರ್ವೇಷನ್ ಮೂವ್ಮೆಂಟ್’ (ಯು.ಸಿ.ಎಂ) ಸಂಘಟನೆಯು ದೂರಿದೆ.</p>.<p>ಹೆದ್ದಾರಿ ವಿಸ್ತರಣೆಗಾಗಿ ಮರಗಳನ್ನು ತೆರವು ಮಾಡದಂತೆ 2020ರ ಡಿ.22ರಂದು ರಾಜ್ಯ ಹೈಕೋರ್ಟ್ನಲ್ಲಿ ಸಂಘಟನೆಯು ಅರ್ಜಿ ಸಲ್ಲಿಸಿತ್ತು. ಅದನ್ನು ಆಧರಿಸಿ ನ್ಯಾಯಾಲಯವು ರಾಷ್ಟ್ರೀಯ ಹೆದ್ದಾರಿ ಪ್ರಾಧಿ<br />ಕಾರಕ್ಕೆ (ಎನ್.ಎಚ್.ಎ.ಐ) ಜನವರಿ 5ರಂದು ನೋಟಿಸ್<br />ಜಾರಿ ಮಾಡಿತ್ತು. ಅರಣ್ಯ<br />ಸಚಿವಾಲಯವು ಕಾಮಗಾರಿಗೆ 2020ರ ಸೆ.23ರಂದು ನೀಡಿದ ಮೊದಲ ಹಂತದ ಅನುಮತಿಯನ್ನೇ ಮುಂದಿಟ್ಟುಕೊಂಡು ಕಾಮಗಾರಿ ಆರಂಭಿಸಲಾಗಿದೆ. ಆದರೆ, ಮರಗಳನ್ನು ಕತ್ತರಿಸುವ ಮೊದಲು ಎನ್.ಎಚ್.ಎ.ಐ ಹಾಗೂ ಅರಣ್ಯ ಇಲಾಖೆಯು ಹೈಕೋರ್ಟ್ನಿಂದ ಅನುಮತಿ ಪಡೆದಿಲ್ಲ ಎಂದು ಆರೋಪಿಸಿದೆ.</p>.<p>ತರಾತುರಿಯಲ್ಲಿ ಮರಗಳನ್ನು ಕಡಿದು ಹಾಕುವುದು ನ್ಯಾಯಾಲಯಕ್ಕೆ ಅಗೌರವ ತೋರಿದಂತಾಗುತ್ತದೆ. ಈ ಎಲ್ಲ ಅಂಶಗಳೂ ಎರಡೂ ಇಲಾಖೆಗಳ ಅಧಿಕಾರಿಗಳಿಗೆ ತಿಳಿದಿದೆ. ಆದರೂ ಕಾಮಗಾರಿ ಮುಂದುವರಿಸಿರುವುದು ಸರಿಯಲ್ಲ. ಮರಗಳನ್ನು ತೆರವು ಮಾಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಸಂಘಟನೆಯು ಆಗ್ರಹಿಸಿದೆ.</p>.<p>ಒಟ್ಟು 58.92 ಕಿ.ಮೀ. ರಾಜ್ಯ ಹೆದ್ದಾರಿಯನ್ನು ₹ 440.16 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಕೇಂದ್ರ ಸರ್ಕಾರದ ‘ಸಾಗರಮಾಲಾ’ ಯೋಜನೆಯಡಿ ತಡಸ– ಬೇಲೆಕೇರಿ ಸಂಪರ್ಕಿಸುವ ರಸ್ತೆ ಇದಾಗಿದೆ. ಶಿರಸಿ ಮತ್ತು ಹೊನ್ನಾವರ ಅರಣ್ಯ ವಲಯದಲ್ಲಿ ಈ ರಸ್ತೆ ಸಾಗುತ್ತದೆ.</p>.<p>ರಸ್ತೆಯು ಹಾದುಹೋಗುವ ಪ್ರದೇಶವು ಪಶ್ಚಿಮಘಟ್ಟವಾಗಿದ್ದು, ಅಮೂಲ್ಯ ಪ್ರಾಕೃತಿಕ ಸಂಪತ್ತನ್ನೊಳಗೊಂಡಿದೆ. ಹಾಗಾಗಿ ರಸ್ತೆ ವಿಸ್ತರಣೆ ಮಾಡದಂತೆ ಪರಿಸರವಾದಿಗಳು ಆಕ್ಷೇಪವೆತ್ತಿದ್ದರು. ಇದರಿಂದ ಎರಡು ವರ್ಷಗಳ ಹಿಂದೆ ಗುತ್ತಿಗೆ ಆಗಿದ್ದರೂ ಕಾಮಗಾರಿ ವಿಳಂಬವಾಗಿತ್ತು. ಬಳಿಕ ರಸ್ತೆ ವಿಸ್ತರಣೆಯ ಪ್ರಮಾಣವನ್ನು ಕಡಿಮೆ ಮಾಡಿದ ಎನ್.ಎಚ್.ಎ.ಐ, ಪುನಃ ಕೇಂದ್ರ ಅರಣ್ಯ ಸಚಿವಾಲಯಕ್ಕೆ ಅರ್ಜಿ ಸಲ್ಲಿಸಿತು. ಈ ಪ್ರಸ್ತಾವಕ್ಕೆ 2020ರ ಸೆ.19ರಂದು ಸಚಿವಾಲಯವು ಒಪ್ಪಿಗೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>