ರಸ್ತೆಯು ಹಾದುಹೋಗುವ ಪ್ರದೇಶವು ಪಶ್ಚಿಮಘಟ್ಟವಾಗಿದ್ದು, ಅಮೂಲ್ಯ ಪ್ರಾಕೃತಿಕ ಸಂಪತ್ತನ್ನೊಳಗೊಂಡಿದೆ. ಹಾಗಾಗಿ ರಸ್ತೆ ವಿಸ್ತರಣೆ ಮಾಡದಂತೆ ಪರಿಸರವಾದಿಗಳು ಆಕ್ಷೇಪವೆತ್ತಿದ್ದರು. ಇದರಿಂದ ಎರಡು ವರ್ಷಗಳ ಹಿಂದೆ ಗುತ್ತಿಗೆ ಆಗಿದ್ದರೂ ಕಾಮಗಾರಿ ವಿಳಂಬವಾಗಿತ್ತು. ಬಳಿಕ ರಸ್ತೆ ವಿಸ್ತರಣೆಯ ಪ್ರಮಾಣವನ್ನು ಕಡಿಮೆ ಮಾಡಿದ ಎನ್.ಎಚ್.ಎ.ಐ, ಪುನಃ ಕೇಂದ್ರ ಅರಣ್ಯ ಸಚಿವಾಲಯಕ್ಕೆ ಅರ್ಜಿ ಸಲ್ಲಿಸಿತು. ಈ ಪ್ರಸ್ತಾವಕ್ಕೆ 2020ರ ಸೆ.19ರಂದು ಸಚಿವಾಲಯವು ಒಪ್ಪಿಗೆ ನೀಡಿತ್ತು.