ವಾರಾಂತ್ಯದ ಹಿನ್ನೆಲೆಯಲ್ಲಿ ಜಾತ್ರೆಗೆ ಬಂದವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಶನಿವಾರ ಸಂಜೆಯಿಂದಲೇ ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ತಲೆದೋರಿದೆ. ಅಗಸೆಬಾಗಿಲ, ಜೂ ವೃತ್ತ, ಯಲ್ಲಾಪುರ ನಾಕಾ, ಹುಬ್ಬಳ್ಳಿ ರಸ್ತೆ, ಕರಿಗುಂಡಿ ಕ್ರಾಸ್ ಸೇರಿದಂತೆ ಹಲವು ಕಡೆಗಳಲ್ಲಿ ವಾಹನಗಳ ಸಂಚಾರಕ್ಕೆ ತೊಡಕು ಉಂಟಾಗಿತ್ತು.