ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಂತ್ಯ: ಜಾತ್ರೆಯಲ್ಲಿ ನೂಕುನುಗ್ಗಲು

ಎರಡು ದಿನಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಭಕ್ತರ ಭೇಟಿ
Last Updated 20 ಮಾರ್ಚ್ 2022, 13:59 IST
ಅಕ್ಷರ ಗಾತ್ರ

ಶಿರಸಿ: ಮಾರಿಕಾಂಬಾ ದೇವಿ ಜಾತ್ರೆಯ ಆರನೇ ದಿನವಾದ ಭಾನುವಾರ ಜಾತ್ರೆಪೇಟೆಗೆ ಜನಸಾಗರ ಹರಿದು ಬಂದಿತು. ಪರಿಣಾಮವಾಗಿ ಜಾತ್ರಾ ಗದ್ದುಗೆಯಲ್ಲಿ ನೂಕುನುಗ್ಗಲು ಉಂಟಾಯಿತು.

ನಸುಕಿನ ಜಾವ 5 ಗಂಟೆಗೆ ದೇವಿ ದರ್ಶನ ಆರಂಭವಾಗಿತ್ತು. 4.30ರಿಂದಲೇ ಸರತಿ ಶುರುವಾಗಿತ್ತು. ದೂರದ ಊರುಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ವಿಶೇಷ ಆಮಂತ್ರಿತರ ಸಾಲು ಕೂಡ ಎರಡು ಕಿ.ಮೀನಷ್ಟು ಉದ್ದದವರೆಗೆ ಇತ್ತು. ವಿಶೇಷ ಗಣ್ಯರ ಕೌಂಟರ್‌ನಲ್ಲೂ ನೂಕುನುಗ್ಗಲು ಉಂಟಾದ ಪರಿಣಾಮ ಕೆಲಹೊತ್ತು ಅಲ್ಲಿಂದ ದರ್ಶನಕ್ಕೆ ಅವಕಾಶ ನೀಡುವುದನ್ನು ತಡೆಯಲಾಗಿತ್ತು.

ವಾರಾಂತ್ಯದ ಶನಿವಾರ ಮತ್ತು ಭಾನುವಾರ ಸುಮಾರು 6 ಲಕ್ಷಕ್ಕೂ ಹೆಚ್ಚು ಭಕ್ತರು ಜಾತ್ರೆಗೆ ಭೇಟಿ ನೀಡಿದ್ದರು ಎಂದು ಅಂದಾಜಿಸಲಾಗಿದೆ. ಈ ಪ್ರಮಾಣ ಕಳೆದ ವರ್ಷಕ್ಕಿಂತಲೂ ಹೆಚ್ಚಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ದಿನದಲ್ಲಿಲಕ್ಷಕ್ಕೂ ಹೆಚ್ಚು ಉಡಿ ಸೇವೆ ಸಮರ್ಪಿತಗೊಂಡಿದೆ. ಒಂದೂವರೆ ಲಕ್ಷಕ್ಕಿಂತ ಹೆಚ್ಚು ಲಡ್ಡು ಪ್ರಸಾದ ಖರ್ಚಾಗಿದೆ ಎಂದು ದೇವಸ್ಥಾನ ಮೂಲಗಳು ತಿಳಿಸಿವೆ.

ಸಚಿವರಿಂದ ದೇವಿ ದರ್ಶನ: ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾನುವಾರ ಮಾರಿಕಾಂಬಾ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ನಿಗಮ ಮಂಡಳಿಗಳ ಪ್ರಮುಖರು ಕೂಡ ದೇವಿಯ ದರ್ಶನ ಪಡೆದರು.

ಸಂಚಾರ ದಟ್ಟಣೆ ಸಮಸ್ಯೆ:

ವಾರಾಂತ್ಯದ ಹಿನ್ನೆಲೆಯಲ್ಲಿ ಜಾತ್ರೆಗೆ ಬಂದವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಶನಿವಾರ ಸಂಜೆಯಿಂದಲೇ ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ತಲೆದೋರಿದೆ. ಅಗಸೆಬಾಗಿಲ, ಜೂ ವೃತ್ತ, ಯಲ್ಲಾಪುರ ನಾಕಾ, ಹುಬ್ಬಳ್ಳಿ ರಸ್ತೆ, ಕರಿಗುಂಡಿ ಕ್ರಾಸ್ ಸೇರಿದಂತೆ ಹಲವು ಕಡೆಗಳಲ್ಲಿ ವಾಹನಗಳ ಸಂಚಾರಕ್ಕೆ ತೊಡಕು ಉಂಟಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT