ಪಟ್ಟಣದ ಬಂದರು ರಸ್ತೆ ನಿವಾಸಿಗಳಾದ ಆರೋಪಿಗಳೆಲ್ಲರೂ 17 ವರ್ಷದ ಆಸುಪಾಸಿನವರು. ಆರು ಮಂದಿ ಮೂರು ದ್ವಿಚಕ್ರ ವಾಹನಗಳಲ್ಲಿ ತೆರಳಿ ಈ ಕೃತ್ಯ ಎಸಗಿದ್ದಾರೆ. ಹನುಮಾನ್ ನಗರದಲ್ಲಿ ಆಟೊರಿಕ್ಷಾ ಚಾಲಕ ಕೃಷ್ಣ ಮಾಸ್ತಪ್ಪ ನಾಯ್ಕ ಎಂಬುವವರ ಎದೆಯ ಮೇಲೆ ಮೊಟ್ಟೆಯಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಪುರವರ್ಗ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಂಜುನಾಥ ಎಂಬುವವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈ ಹಾಗೂ ಕಾಲುಗಳಿಗೆ ಮೊಟ್ಟೆ ಎಸೆದಿದ್ದಾರೆ. ಇದನ್ನು ಗಮನಿಸಿದ ಮಂಜುನಾಥನ ಸಹೋದರ, ಯುವಕರನ್ನು ಬೆನ್ನಟ್ಟಿ ರಾಘವೇಂದ್ರ ಮಠದ ಬಳಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.