ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಅಂದು ಬೆಳಿಗ್ಗೆ 10ಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಚಾಲನೆ ನೀಡುವರು. ಸ್ಕೇಟಿಂಗ್ ಮಾಡುವವರು ಯಲ್ಲಾಪುರ- ಶಿರಸಿ- ಸಾಗರ- ತಿಪಟೂರು- ಕುಣಿಗಲ್ ಮಾರ್ಗವಾಗಿ ಬೆಂಗಳೂರಿಗೆ ಮೇ 12ರಂದು ತಲುಪಲಿದ್ದಾರೆ. ಅಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮಾಣ ಪತ್ರ ವಿತರಿಸಲಿದ್ದಾರೆ' ಎಂದರು.