ಸ್ಕೇಟ್ ಮಾಡುತ್ತಲೇ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮಕ್ಕಳು, ಜನರಿಗೆ ಕರಪತ್ರ ವಿತರಿಸಿದರು. ಪೌರಾಯುಕ್ತ ರಮೇಶ ನಾಯಕ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳಾದ ಅದ್ವೈತ, ನಿತಿಶ್, ಕುಶಾಲ್, ರೋಹಿತ್, ಪ್ರತಿಕ್, ಕುಮಾರ, ಗಗನ, ವಿಪುಲ್, ರಾಜುಗುರು ಭಾಗವಹಿಸಿದ್ದರು. ಬೈಕ್ ಸವಾರರು, ಆಟೊರಿಕ್ಷಾ ಚಾಲಕರು, ಬಟ್ಟೆ ಅಂಗಡಿ ಹೀಗೆ ದಾರಿಯಲ್ಲಿ ಸಿಕ್ಕವರಿಗೆಲ್ಲ ಕರಪತ್ರ ನೀಡಿದರು.