<p><strong>ಅಂಕೋಲಾ</strong>: ಪಟ್ಟಣದ ಸುಂದರ ನಾರಾಯಣ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯ ಯು.ಪಿ.ಎಸ್ ಕೊಠಡಿಯಲ್ಲಿ ಮಂಗಳವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕ ಉಂಟುಮಾಡಿತು.</p>.<p>ಗಾಬರಿಗೊಂಡ ಬ್ಯಾಂಕ್ ಸಿಬ್ಬಂದಿ ತಕ್ಷಣ ಅಗ್ನಿಶಾಮಕ ಠಾಣೆಗೆ ವಿಷಯ ತಿಳಿಸಿದರು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ತಂಡದವರು ಕೇವಲ 10 ನಿಮಿಷಗಳಲ್ಲಿ ಬೆಂಕಿ ಆರಿಸಿ ಸಂಭಾವ್ಯ ದೊಡ್ಡ ಅನಾಹುತವನ್ನು ತಪ್ಪಿಸಿದರು.</p>.<p>ರಸ್ತೆ ಮೇಲಿನ ವಿದ್ಯುತ್ ತಂತಿಯ ಮೇಲೆ ಮರದ ಟೊಂಗೆ ಬಿದ್ದ ಪರಿಣಾಮ ವಿದ್ಯುತ್ ಸಂಚಾರದಲ್ಲಿ ಏರುಪೇರು ಉಂಟಾಗಿತ್ತು. ಈ ಕಾರಣದಿಂದ ಬೆಂಕಿ ತಗಲಿರಬಹುದು ಎನ್ನಲಾಗಿದೆ. ಕೊಠಡಿಯಲ್ಲಿದ್ದ ಯು.ಪಿ.ಎಸ್ ಚಾರ್ಜರ್ ಸುಟ್ಟುಹೋಗಿದ್ದು ಅಂದಾಜು ₹ 40 ಸಾವಿರ ಹಾನಿ ಸಂಭವಿಸಿದೆ. ಕೊಠಡಿಯಲ್ಲಿ ಯು.ಪಿ.ಎಸ್ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ಉಪಕರಣಗಳಿದ್ದು, ಹೆಚ್ಚಿನ ಹಾನಿ ಸಂಭವಿಸಿಲ್ಲ.</p>.<p>ಅಗ್ನಿಶಾಮಕ ದಳದ ಠಾಣಾಧಿಕಾರಿ ಉಮೇಶ ನಾಯ್ಕ, ಸಿಬ್ಬಂದಿ ಗಜಾನನ ನಾಯ್ಕ, ಗಣೇಶ ಶೇಟ್, ಗಣೇಶ ನಾಯ್ಕ, ಜೀವನ ಬಬ್ರುಕರ, ಅಮಿತ್ ನಾಯ್ಕ ಮತ್ತು ಬ್ಯಾಂಕ್ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ</strong>: ಪಟ್ಟಣದ ಸುಂದರ ನಾರಾಯಣ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯ ಯು.ಪಿ.ಎಸ್ ಕೊಠಡಿಯಲ್ಲಿ ಮಂಗಳವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕ ಉಂಟುಮಾಡಿತು.</p>.<p>ಗಾಬರಿಗೊಂಡ ಬ್ಯಾಂಕ್ ಸಿಬ್ಬಂದಿ ತಕ್ಷಣ ಅಗ್ನಿಶಾಮಕ ಠಾಣೆಗೆ ವಿಷಯ ತಿಳಿಸಿದರು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ತಂಡದವರು ಕೇವಲ 10 ನಿಮಿಷಗಳಲ್ಲಿ ಬೆಂಕಿ ಆರಿಸಿ ಸಂಭಾವ್ಯ ದೊಡ್ಡ ಅನಾಹುತವನ್ನು ತಪ್ಪಿಸಿದರು.</p>.<p>ರಸ್ತೆ ಮೇಲಿನ ವಿದ್ಯುತ್ ತಂತಿಯ ಮೇಲೆ ಮರದ ಟೊಂಗೆ ಬಿದ್ದ ಪರಿಣಾಮ ವಿದ್ಯುತ್ ಸಂಚಾರದಲ್ಲಿ ಏರುಪೇರು ಉಂಟಾಗಿತ್ತು. ಈ ಕಾರಣದಿಂದ ಬೆಂಕಿ ತಗಲಿರಬಹುದು ಎನ್ನಲಾಗಿದೆ. ಕೊಠಡಿಯಲ್ಲಿದ್ದ ಯು.ಪಿ.ಎಸ್ ಚಾರ್ಜರ್ ಸುಟ್ಟುಹೋಗಿದ್ದು ಅಂದಾಜು ₹ 40 ಸಾವಿರ ಹಾನಿ ಸಂಭವಿಸಿದೆ. ಕೊಠಡಿಯಲ್ಲಿ ಯು.ಪಿ.ಎಸ್ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ಉಪಕರಣಗಳಿದ್ದು, ಹೆಚ್ಚಿನ ಹಾನಿ ಸಂಭವಿಸಿಲ್ಲ.</p>.<p>ಅಗ್ನಿಶಾಮಕ ದಳದ ಠಾಣಾಧಿಕಾರಿ ಉಮೇಶ ನಾಯ್ಕ, ಸಿಬ್ಬಂದಿ ಗಜಾನನ ನಾಯ್ಕ, ಗಣೇಶ ಶೇಟ್, ಗಣೇಶ ನಾಯ್ಕ, ಜೀವನ ಬಬ್ರುಕರ, ಅಮಿತ್ ನಾಯ್ಕ ಮತ್ತು ಬ್ಯಾಂಕ್ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>